12:13 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ  ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

25/03/2022, 19:53

ರಾಹುಲ್ ಅಥಣಿ ಬೀದರ್

info.reporterkarnataka@gmail.com

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್

ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ  ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾಮದಲ್ಲಿ ಗ್ರಾಮದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆಗೆ ಗಳಿಗೆ ನೇರ ಮಾರುಕಟ್ಟೆ ಒದಗಿಸುವ ಸಲುವಾಗ ಮಾಸಿಕ ಸಂಜೀವಿನಿ ಸಂತೆಯನ್ನು ಏರ್ಪಡಿಸಲಾಯಿತು.

ಈ ಸಂತೆಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ  ಮತ್ತು ಮಾರಾಟ ಮಾಡಲಾಯಿತು. ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ನೀಡಿದ ತಾಲ್ಲೂಕಾ ಯೋಜನಾ ಅಧಿಕಾರಿ ಶಂಕರ ಬಿ. ಕನಕ ಮಾತನಾಡಿ, ಸಂತೆಗಳನ್ನು ಏರ್ಪಡಿಸುವದರಿಂದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ಉತ್ಪಾದನೆ ಗಳಿಗೆ ಯೋಗ್ಯ ವಾದ ಬೆಲೆ ಸಿಗುವಂತಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತೆ ಮನವಿ ಮಾಡಿದರು. 

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮನ್ನಾ ಏ ಖೇಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳಾದ ಭಾಗ್ಯಜೋತಿ ಮಾತನಾಡಿ, ಈ ಸಂತೆ ಯಿಂದ ಮಹಿಳೆಯರು ಸ್ವಾವಲಂಬಿಯಾಗುವದಕ್ಕೆ ಸಹಕಾರಿಯಾಗುತ್ತದೆ.  ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಈ  ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಂಡರೆ ಮಾಸಿಕ ಸಂಜೀವಿನಿ ಸಂತೆಯನ್ನು ಮುಂಬರುವ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಪ್ರಾರಂಬಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಗುಂಡಮ್ಮ ನಾಟಿಕಾರ ಹಾಗೂ ಗ್ರಾಮದ ಮುಖಂಡರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು