6:53 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ  ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

25/03/2022, 19:53

ರಾಹುಲ್ ಅಥಣಿ ಬೀದರ್

info.reporterkarnataka@gmail.com

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್

ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ  ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾಮದಲ್ಲಿ ಗ್ರಾಮದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆಗೆ ಗಳಿಗೆ ನೇರ ಮಾರುಕಟ್ಟೆ ಒದಗಿಸುವ ಸಲುವಾಗ ಮಾಸಿಕ ಸಂಜೀವಿನಿ ಸಂತೆಯನ್ನು ಏರ್ಪಡಿಸಲಾಯಿತು.

ಈ ಸಂತೆಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ  ಮತ್ತು ಮಾರಾಟ ಮಾಡಲಾಯಿತು. ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ನೀಡಿದ ತಾಲ್ಲೂಕಾ ಯೋಜನಾ ಅಧಿಕಾರಿ ಶಂಕರ ಬಿ. ಕನಕ ಮಾತನಾಡಿ, ಸಂತೆಗಳನ್ನು ಏರ್ಪಡಿಸುವದರಿಂದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ಉತ್ಪಾದನೆ ಗಳಿಗೆ ಯೋಗ್ಯ ವಾದ ಬೆಲೆ ಸಿಗುವಂತಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತೆ ಮನವಿ ಮಾಡಿದರು. 

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮನ್ನಾ ಏ ಖೇಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳಾದ ಭಾಗ್ಯಜೋತಿ ಮಾತನಾಡಿ, ಈ ಸಂತೆ ಯಿಂದ ಮಹಿಳೆಯರು ಸ್ವಾವಲಂಬಿಯಾಗುವದಕ್ಕೆ ಸಹಕಾರಿಯಾಗುತ್ತದೆ.  ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಈ  ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಂಡರೆ ಮಾಸಿಕ ಸಂಜೀವಿನಿ ಸಂತೆಯನ್ನು ಮುಂಬರುವ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಪ್ರಾರಂಬಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಗುಂಡಮ್ಮ ನಾಟಿಕಾರ ಹಾಗೂ ಗ್ರಾಮದ ಮುಖಂಡರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು