12:20 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು