2:12 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ

25/03/2022, 23:45

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಪ್ರಾರಂಭಕ್ಕಾಗಿ ನಾಲ್ಕು ಕಂಪನಿಗಳಿಗೆ ತರಂಗಾಂತರಗಳನ್ನು ರೂಪಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಯೋಗಗಳು ಪೂರ್ಣಗೊಂಡು, ದೇಶಾದ್ಯಂತ 5ಜಿ ಸೇವೆ ಜನರಿಗೆ ಸಿಗಲಿದೆ ಎಂದು ತಿಳಿಸಿದರು.

ಇನ್ನು ಬಿಎಸ್​ಎನ್​ಎಲ್​ ಕೂಡ ಈ ವರ್ಷ 4 ಜಿ ಸೇವೆಯನ್ನು ಆರಂಭಿಸಲಿದೆ. ಕಳೆದ 7 ವರ್ಷಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಮಹಾನ್​ ಕ್ರಾಂತಿಯಾಗಿದೆ. ಅಂತರ್ಜಾಲ ಬಳಕೆಯ ಮೇಲೆ ಸುಂಕಗಳು ಕಡಿಮೆ ಇದ್ದ ಕಾರಣ ಡೇಟಾ ಬಳಕೆಯು ಹೆಚ್ಚಿದೆ ಎಂದು ಅವರು ನೀಡಿದರು.

ದೇಶದಲ್ಲಿ ಮೊಬೈಲ್ ಬಳಕೆದಾರರ ಪ್ರಮಾಣ ಅಧಿಕವಾಗುತ್ತಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಮೊಬೈಲ್ ಚಂದಾದಾರರ ಸಂಖ್ಯೆ 2020 ರಲ್ಲಿದ್ದ 1157.75 ಮಿಲಿಯನ್‌ನಿಂದ 2021 ರ ವೇಳೆಗೆ ಅದು 1180.96 ಮಿಲಿಯನ್‌ಗೆ ಏರಿದೆ ಎಂದು ಮಾಹಿತಿ ನೀಡಿದರು,.

ಇತ್ತೀಚಿನ ಸುದ್ದಿ

ಜಾಹೀರಾತು