3:28 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್

26/03/2022, 10:09

ಬೈಲಹೊಂಗಲ(reporterkarnataka.com):

ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯ ಅಧೀಕ್ಷಕ ಬಸವರಾಜು ಮೂಡಸಿ ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಹೋಬಳಿ ವ್ಯಾಪ್ತಿಗೆ ಬರುವ ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಹನುಮಂತ ಬಸವಣೆಪ್ಪ ಆಲಿಯಾಸ್ ಲಕ್ಕಣ್ಣನವರ್ ಎಂಬಾತನ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ, ದಾಳಿ ಸಮಯದಲ್ಲಿ 2 ಲೀಟರ್  24  ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕಳ್ಳ ಭಟ್ಟಿ ಸಾರಾಯಿ ಸಿಕ್ಕಿದ್ದು, ಒಟ್ಟು 24 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. 

ಬೈಲಹೊಂಗಲ ಅಧೀಕ್ಷಕ  ಬಸವರಾಜು ಮೂಡಸಿ ನೇತೃತ್ವದಲ್ಲಿ ನಡೆದ ಈ  ದಾಳಿಯಲ್ಲಿ ಉಪ ನಿರೀಕ್ಷಕ ಡಿ.ಎಸ್. ತಲ್ಲೂರ, ವೀರೇಶ್ ಯರಗೋಪ್ಪ, ಸಿಬ್ಬಂದಿಗಳಾದ ವಿ.ಎಂ. ಕೇರಾಳಿ, ಎನ್.ವೈ. ತಗರಿ

ಭಾಗವಹಿಸಿದ್ದರು. ಒಟ್ಟಾರೆ  ಅಕ್ರಮ ಕಳ್ಳಭಟ್ಟಿ ಮಾರಾಟಕ್ಕೆ ಕಡಿವಾಣಕ್ಕೆ ಬ್ರೇಕ್ ಹಾಕಲು ಮುಂದಾಗಿ ದಿನ ನಿತ್ಯ ಕಾರ್ಯಾಚರಣೆ ಮಾಡುತ್ತಿರುವ ಬೈಲಹೊಂಗಲ ಅಧೀಕ್ಷಕ ಬಸವರಾಜು ಮೂಡಸಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಅಬಕಾರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು