4:11 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್

26/03/2022, 10:09

ಬೈಲಹೊಂಗಲ(reporterkarnataka.com):

ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯ ಅಧೀಕ್ಷಕ ಬಸವರಾಜು ಮೂಡಸಿ ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಹೋಬಳಿ ವ್ಯಾಪ್ತಿಗೆ ಬರುವ ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಹನುಮಂತ ಬಸವಣೆಪ್ಪ ಆಲಿಯಾಸ್ ಲಕ್ಕಣ್ಣನವರ್ ಎಂಬಾತನ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ, ದಾಳಿ ಸಮಯದಲ್ಲಿ 2 ಲೀಟರ್  24  ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕಳ್ಳ ಭಟ್ಟಿ ಸಾರಾಯಿ ಸಿಕ್ಕಿದ್ದು, ಒಟ್ಟು 24 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. 

ಬೈಲಹೊಂಗಲ ಅಧೀಕ್ಷಕ  ಬಸವರಾಜು ಮೂಡಸಿ ನೇತೃತ್ವದಲ್ಲಿ ನಡೆದ ಈ  ದಾಳಿಯಲ್ಲಿ ಉಪ ನಿರೀಕ್ಷಕ ಡಿ.ಎಸ್. ತಲ್ಲೂರ, ವೀರೇಶ್ ಯರಗೋಪ್ಪ, ಸಿಬ್ಬಂದಿಗಳಾದ ವಿ.ಎಂ. ಕೇರಾಳಿ, ಎನ್.ವೈ. ತಗರಿ

ಭಾಗವಹಿಸಿದ್ದರು. ಒಟ್ಟಾರೆ  ಅಕ್ರಮ ಕಳ್ಳಭಟ್ಟಿ ಮಾರಾಟಕ್ಕೆ ಕಡಿವಾಣಕ್ಕೆ ಬ್ರೇಕ್ ಹಾಕಲು ಮುಂದಾಗಿ ದಿನ ನಿತ್ಯ ಕಾರ್ಯಾಚರಣೆ ಮಾಡುತ್ತಿರುವ ಬೈಲಹೊಂಗಲ ಅಧೀಕ್ಷಕ ಬಸವರಾಜು ಮೂಡಸಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಅಬಕಾರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು