9:40 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್

26/03/2022, 10:09

ಬೈಲಹೊಂಗಲ(reporterkarnataka.com):

ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆಯ ಅಧೀಕ್ಷಕ ಬಸವರಾಜು ಮೂಡಸಿ ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ಬೈಲಹೊಂಗಲ ತಾಲ್ಲೂಕಿನ ನೇಸರ್ಗಿ ಹೋಬಳಿ ವ್ಯಾಪ್ತಿಗೆ ಬರುವ ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಹನುಮಂತ ಬಸವಣೆಪ್ಪ ಆಲಿಯಾಸ್ ಲಕ್ಕಣ್ಣನವರ್ ಎಂಬಾತನ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ, ದಾಳಿ ಸಮಯದಲ್ಲಿ 2 ಲೀಟರ್  24  ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕಳ್ಳ ಭಟ್ಟಿ ಸಾರಾಯಿ ಸಿಕ್ಕಿದ್ದು, ಒಟ್ಟು 24 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. 

ಬೈಲಹೊಂಗಲ ಅಧೀಕ್ಷಕ  ಬಸವರಾಜು ಮೂಡಸಿ ನೇತೃತ್ವದಲ್ಲಿ ನಡೆದ ಈ  ದಾಳಿಯಲ್ಲಿ ಉಪ ನಿರೀಕ್ಷಕ ಡಿ.ಎಸ್. ತಲ್ಲೂರ, ವೀರೇಶ್ ಯರಗೋಪ್ಪ, ಸಿಬ್ಬಂದಿಗಳಾದ ವಿ.ಎಂ. ಕೇರಾಳಿ, ಎನ್.ವೈ. ತಗರಿ

ಭಾಗವಹಿಸಿದ್ದರು. ಒಟ್ಟಾರೆ  ಅಕ್ರಮ ಕಳ್ಳಭಟ್ಟಿ ಮಾರಾಟಕ್ಕೆ ಕಡಿವಾಣಕ್ಕೆ ಬ್ರೇಕ್ ಹಾಕಲು ಮುಂದಾಗಿ ದಿನ ನಿತ್ಯ ಕಾರ್ಯಾಚರಣೆ ಮಾಡುತ್ತಿರುವ ಬೈಲಹೊಂಗಲ ಅಧೀಕ್ಷಕ ಬಸವರಾಜು ಮೂಡಸಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಅಬಕಾರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು