7:10 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು