7:49 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು