3:51 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು