8:30 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ಆಲ್ಕೋಡ ಗ್ರಾಮ ಪಂಚಾಯಿತಿನಲ್ಲಿ ಭಾರಿ ಭ್ರಷ್ಟಾಚಾರ: ನಕಲಿ ಬಿಲ್ ಸೃಷ್ಟಿಸಿ 10 ಲಕ್ಷ ರೂ. ಗುಳುಂ: ನಡೆಯದ ಕಾಮಗಾರಿಯ ಹೆಸರಿನಲ್ಲೂ ಬಿಲ್! 

10/06/2021, 16:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸುಮಾರು 10 ಲಕ್ಷ ರೂ. ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗೂ ದೂರು ನೀಡಲಾಗಿದೆ. 

ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ  ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 10 ಲಕ್ಷ ರೂ. ಗುಳಂ ಮಾಡಿರುವ ಆರೋಪ ಕೇಳಿ ಬಂದಿದೆ. ಶಾವಂತಗಲ್ ಗ್ರಾಮದ ಬೀದಿ ದೀಪಗಳ ಹೆಸರಿನಲ್ಲಿ 50 ಸಾವಿರ ರೂಪಾಯಿ, ಕುಡಿಯುವ ನೀರಿನ ನಿರ್ವಹಣೆಗೆ 40 ಸಾವಿರ ರೂ. ಹಾಗೂ ಇತರ ನಡೆಯದ ಕಾಮಗಾರಿಯ ನಕಲಿ ದಾಖಲೆ ಸೃಷ್ಟಿಸಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹನುಮಂತ ಶಾವಂತಗಲ್ ಹಾಗೂ  ಗ್ರಾಮ ಪಂಚಾಯಿತಿನ ಇತರ ಐವರು ಸದಸ್ಯರು ಆರೋಪಿಸಿದ್ದಾರೆ.

ಆಲ್ಕೋಡ ಗ್ರಾಮಗಳಲ್ಲಿ ಫಾಗಿಂಗ್ ನಡೆಸಿದ ಹೆಸರಿನಲ್ಲೂ ಹಣ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದನ್ನು ಇತರ ಸದಸ್ಯರ ಗಮನಕ್ಕೆ ತರಲಿಲ್ಲ. ಪಂಚಾಯಿತಿ ಅಧ್ಯಕ್ಷರು ಹಾಗೂ

 ಅಭಿವೃದ್ಧಿ ಅಧಿಕಾರಿ ಸೇರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು  ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೂರು ನೀಡಲಾಗಿದೆ. ಅವ್ಯವಹಾರ ಬಗ್ಗೆ ದೂರು ಬಂದಿದೆ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಾಪಂ ಕಾರ್ಯನಿರ್ವಾಹಣಾಧಿಕಾರಿ ಪಂಪಾಪತಿ ಹಿರೇಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು