11:15 AM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ರೈತರು ಅಡವಿಟ್ಟಿದ್ದ ಚಿನ್ನಾಭರಣ ಫೈನಾನ್ಸ್‌ ಗೆ ಮಾರಿ ರಿಯಲ್ ಎಸ್ಟೇಟ್ ದಂಧೆ: ಬ್ಯಾಂಕ್‌ ಮ್ಯಾನೇಜರ್‌ ಬಂಧನ

28/03/2022, 10:05

ರಾಮನಗರ(reporterkarnataka.com): ಸಹಕಾರ ಬ್ಯಾಂಕ್ ವೊಂದರಲ್ಲಿ ರೈತರು ಅಡವಿಟ್ಟಿದ್ದ ಚಿನ್ನವನ್ನು ಬ್ಯಾಂಕ್ ನ ವ್ಯವಸ್ಥಾಪಕ ಖಾಸಗಿ ಫೈನಾನ್ಸ್ ಕಂಪನಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಬ್ಯಾಂಕ್ ನಲ್ಲಿ ರೈತರು ಅಡವಿಟ್ಟಿದ್ದ ಸುಮಾರು 8 ಕೆಜಿಯ ಚಿನ್ನಾಭರಣವನ್ನು ಬ್ಯಾಂಕ್ ನ ವ್ಯವಸ್ಥಾಪಕ ಗೋವಿಂದಪ್ಪ ಎನ್ನುವವರು ಫೈನಾನ್ಸ್‌ ಗೆ ಮಾರಾಟ ಮಾಡಿದ್ದಾರೆ.

ರೈತರು ತಾನು ಅಡವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಳ್ಳಲು ಬಂದಾಗ ಅವರಿಗೆ ಒಡವೆ ನೀಡದೆ ಮ್ಯಾನೇಜರ್‌ ಸತಾಯಿಸುತ್ತಿದ್ದ. ಈ ಬಗ್ಗೆ ಮೇಲಧಿಕಾರಿಗಳಿಗೆ ರೈತ ದೂರು ಸಲ್ಲಿಸಿದ್ದರು.

ರೈತನ ದೂರಿನ ಆಧಾರದ ಮೇಲೆ ಗೋವಿಂದಪ್ಪನನ್ನು ವಿಚಾರಿಸಿದಾಗ ಬಸ್ ನಲ್ಲಿ ಹೋಗುವಾಗ ಚಿನ್ನಾಭರಣ ಕಳತನವಾಯಿತು ಎಂದು ಸುಳ್ಳು ಹೇಳಿದ.‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.

ಪ್ರಕರಣ ಸಂಬಂಧ ಗೋವಿಂದಪ್ಪನನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಎಷ್ಟು ಮೊತ್ತದ ಚಿನ್ನಾಭರಣ ಮಾರಾಟ ಮಾಡಿದ್ದಾನೆ ಎಂಬುದು ಆಡಿಟ್ ನಂತರವೇ ಹೊರಬೀಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು