8:41 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರಿಗೆ ಐಟಿ ಶಾಕ್: ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ನೀಡುವಂತೆ ನೋಟಿಸ್

28/03/2022, 22:45

ಹಾಸನ(reporterkarnataka.com): ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದಾರೆ. ಚೆನ್ನಮ್ಮ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಈ ಕುರಿತು ಪುತ್ರ ಮಾಜಿ ಸಚಿವ  ಎಚ್. ಡಿ. ರೇವಣ್ಣ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳಿಂದ ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ನೋಟಿಸ್ ಕೊಟ್ಟಿದ್ದಾರೆ. ಆದ್ರೇ ಇದಕ್ಕೆ ಉತ್ತರ ಕೊಡೋದು ಗೊತ್ತಿದೆ. ನನಗೆ ಕೊಟ್ಟಿದ್ದರೆ ಬೇಜಾರು ಇರಲಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಕಬ್ಬು ಬೆಳೆದಿದ್ದೇವೆ. ಆಲೂಗಡ್ಡೆ ಬಳೆದಿದ್ದೇವೆ. ನಾವೇನು ಅಕ್ರಮವಾಗಿ ಕೋಟಿ ಕೋಟಿ ಸಂಪಾದಿಸಿಲ್ಲ. ಜೆಡಿಎಸ್ ಮುಖಂಡರಿಗೆ ಆಯ್ಕೆ ಮಾಡಿ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು