2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಡಿಕೇರಿ: ಹುಲಿ ದಾಳಿಗೆ ಕರಿಮೆಣಸು ಕೊಯ್ಯಲು ಬಂದಿದ್ದ ಕಾರ್ಮಿಕ ಸಾವು

28/03/2022, 23:26

ಮಡಿಕೇರಿ(reporterkarnataka.com): ಹುಲಿ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ವಿ.ಬಾಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಗದ್ದೆಮನೆ ನಿವಾಸಿ ಗಣೇಶ್ (29) ಎಂದು ಗುರುತಿಸಲಾಗಿದೆ. ವಿ.ಬಾಡಗ ಸಮೀಪದ‌ ಒಂದನೇ ರುದ್ರಗುಪ್ಪೆಯ ಕೊಂಗಂಡ ಅಯ್ಯಪ್ಪ ಅವರ ತೋಟದಲ್ಲಿ ಕರಿಮೆಣಸು ಕೊಯ್ಯುವ ಕೆಲಸಕ್ಕೆ ಬಂದಿದ್ದ ಗಣೇಶ್ ಮೇಲೆ ಹುಲಿ ದಾಳಿ ನಡೆಸಿದೆ. ಈ ಸಂದರ್ಭ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಳೆದ‌10 ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಅಟ್ರಂಗಡ ಸುಬ್ಬಯ್ಯ ಅವರ ಕರುವನ್ನು ಹುಲಿ ಬಲಿ ಪಡೆದುಕೊಂಡಿತ್ತು. ವಿಷಯ ತಿಳಿದ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ಹುಲಿಯನ್ನು ಸೆರೆ ಹಿಡಿಯದೆ ಮೃತದೇಹವನ್ನು ತೆಗೆಯಲು ಅವಕಾಣಸ ನೀಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅಲ್ಲದೆ ಹುಲಿಗೆ ಕಂಡಲ್ಲಿ ಗುಂಡಿಕ್ಕಲು ಅವಕಾಶ‌ ನೀಡುವಂತೆ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು