3:21 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು!

29/03/2022, 11:14

ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ್​ಫ್ರೆಂಡ್​​ಗಳ ಸಹಾಯದಿಂದ ತಾಯಿಯನ್ನು ಕೊಲೆಮಾಡಿದ್ದಾಳೆ.

ಬಾಲಕಿ ತನ್ನ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದಳು, ಇದರಿಂದ ಮಗಳಿಗೆ ಅಮ್ಮ ಬುದ್ಧಿ ಹೇಳಿದ್ದಕ್ಕೆ ಆಕೆ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದಳು.ಇದೇ ಕಾರಣಕ್ಕೆ ಅಮ್ಮ-ಮಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.

ಆರಂಭದಲ್ಲಿ ಕೊಲೆ ವಿಚಾರ ತಿಳಿದು ಪೊಲೀಸರು ಬಂದಾಗ ಮುನಿಯಲಕ್ಷ್ಮಿ ಎಂಬ ಮಹಿಳೆ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಆಕೆಯ 17 ವರ್ಷದ ಮಗಳು ಮೃತದೇಹದ ಪಕ್ಕದಲ್ಲಿ ಕುಳಿತಿದ್ದಳು ಎನ್ನಲಾಗಿದೆ.

ಈ ಕುರಿತು ವಿಚಾರಿಸಿದಾಗ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ನನ್ನ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಆ ಬಾಲಕಿ ಹೇಳಿದ್ದಳು. ಆದರೆ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಇಬ್ಬರು ಬಾಯ್​ಫ್ರೆಂಡ್​ಗಳ ಸಹಾಯದಿಂದ ಹುಡುಗಿ ತನ್ನ ತಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಗಂಡನೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುನಿಯಲಕ್ಷ್ಮಿ ಒಂಟಿಯಾಗಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 17 ವರ್ಷದ ಬಾಲಕಿ, ಆಕೆಯ ತಂಗಿ ಮತ್ತು ತಮ್ಮ ಅಪ್ಪನೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು