9:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು!

29/03/2022, 11:14

ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ್​ಫ್ರೆಂಡ್​​ಗಳ ಸಹಾಯದಿಂದ ತಾಯಿಯನ್ನು ಕೊಲೆಮಾಡಿದ್ದಾಳೆ.

ಬಾಲಕಿ ತನ್ನ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದಳು, ಇದರಿಂದ ಮಗಳಿಗೆ ಅಮ್ಮ ಬುದ್ಧಿ ಹೇಳಿದ್ದಕ್ಕೆ ಆಕೆ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದಳು.ಇದೇ ಕಾರಣಕ್ಕೆ ಅಮ್ಮ-ಮಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.

ಆರಂಭದಲ್ಲಿ ಕೊಲೆ ವಿಚಾರ ತಿಳಿದು ಪೊಲೀಸರು ಬಂದಾಗ ಮುನಿಯಲಕ್ಷ್ಮಿ ಎಂಬ ಮಹಿಳೆ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಆಕೆಯ 17 ವರ್ಷದ ಮಗಳು ಮೃತದೇಹದ ಪಕ್ಕದಲ್ಲಿ ಕುಳಿತಿದ್ದಳು ಎನ್ನಲಾಗಿದೆ.

ಈ ಕುರಿತು ವಿಚಾರಿಸಿದಾಗ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ನನ್ನ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಆ ಬಾಲಕಿ ಹೇಳಿದ್ದಳು. ಆದರೆ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಇಬ್ಬರು ಬಾಯ್​ಫ್ರೆಂಡ್​ಗಳ ಸಹಾಯದಿಂದ ಹುಡುಗಿ ತನ್ನ ತಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಗಂಡನೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುನಿಯಲಕ್ಷ್ಮಿ ಒಂಟಿಯಾಗಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 17 ವರ್ಷದ ಬಾಲಕಿ, ಆಕೆಯ ತಂಗಿ ಮತ್ತು ತಮ್ಮ ಅಪ್ಪನೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು