7:59 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕಾರ್ಕಳ: ನಾಡಿಗೆ ಬಂದ ಕಾಡುಕೋಣ ನೇರ ಮನೆಯಂಗಳ ಸೇರಿತು!; ನಾಡ ಮಂದಿಗೆ ಮಾತ್ರ ಭಾರಿ ಆತಂಕ

29/03/2022, 21:31

ಕಾರ್ಕಳ(reporterkarnataka.com): ಇಲ್ಲಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ನಡೆದಿದೆ. 

ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು.

ಆದರೆ ಕಾಡುಕೋಣವು ಗ್ರಾಮದ ಏಕೈಕ ಸಂರ್ಪಕ ರಸ್ತೆಯಲ್ಲಿ ಅಡ್ಡವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಒಡಾಟಕ್ಕೆ ಅಡಚಣೆಯಾಯಿತು. ಆ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಕೋಣವನ್ನು ಕಾಡಿಗೆ ಅಟ್ಟಿದರು. 

ಈ ಭಾಗದಲ್ಲಿ ಆಗಾಗ್ಗೆ ಕಾಡುಕೋಣ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಂಡಿದ್ದಾರೆ. 

ಕೆಲ ದಿನಗಳ ಹಿಂದೆ ನೀರೆ ಗ್ರಾಮದ ಹತ್ತಿರ ಪಂಚನಬೆಟ್ಟು ಎಂಬಲ್ಲಿ ಕಾಡುಕೋಣವೊಂದು ಪಾಳುಬಾವಿಗೆ ಬಿದ್ದಿದ್ದು, ಅದನ್ನು ಬಳಿಕ ಅರಣ್ಯ ಇಲಾಖೆಯವರು‌ ರಕ್ಷಣೆ ಮಾಡಿದ್ದರು. 

ಬೊಮ್ಮಾರಬೆಟ್ಟು, ನಿರೇ ಗ್ರಾಮ ಸಹಿತ ವಿವಿಧ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿದ್ದು, ಕಾಡು ಬಿಟ್ಟು ನಾಡಿಗೆ ಬರಲು ಆರಂಭಿಸಿವೆ. 

ಇದರಿಂದ ಜನರು ಆತಂಕದಿಂದಲೇ ದಿನ ಕಳೆಯುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು