8:47 AM Sunday20 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ಕಾರ್ಕಳ: ನಾಡಿಗೆ ಬಂದ ಕಾಡುಕೋಣ ನೇರ ಮನೆಯಂಗಳ ಸೇರಿತು!; ನಾಡ ಮಂದಿಗೆ ಮಾತ್ರ ಭಾರಿ ಆತಂಕ

29/03/2022, 21:31

ಕಾರ್ಕಳ(reporterkarnataka.com): ಇಲ್ಲಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ನಡೆದಿದೆ. 

ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು.

ಆದರೆ ಕಾಡುಕೋಣವು ಗ್ರಾಮದ ಏಕೈಕ ಸಂರ್ಪಕ ರಸ್ತೆಯಲ್ಲಿ ಅಡ್ಡವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಒಡಾಟಕ್ಕೆ ಅಡಚಣೆಯಾಯಿತು. ಆ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಕೋಣವನ್ನು ಕಾಡಿಗೆ ಅಟ್ಟಿದರು. 

ಈ ಭಾಗದಲ್ಲಿ ಆಗಾಗ್ಗೆ ಕಾಡುಕೋಣ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಂಡಿದ್ದಾರೆ. 

ಕೆಲ ದಿನಗಳ ಹಿಂದೆ ನೀರೆ ಗ್ರಾಮದ ಹತ್ತಿರ ಪಂಚನಬೆಟ್ಟು ಎಂಬಲ್ಲಿ ಕಾಡುಕೋಣವೊಂದು ಪಾಳುಬಾವಿಗೆ ಬಿದ್ದಿದ್ದು, ಅದನ್ನು ಬಳಿಕ ಅರಣ್ಯ ಇಲಾಖೆಯವರು‌ ರಕ್ಷಣೆ ಮಾಡಿದ್ದರು. 

ಬೊಮ್ಮಾರಬೆಟ್ಟು, ನಿರೇ ಗ್ರಾಮ ಸಹಿತ ವಿವಿಧ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿದ್ದು, ಕಾಡು ಬಿಟ್ಟು ನಾಡಿಗೆ ಬರಲು ಆರಂಭಿಸಿವೆ. 

ಇದರಿಂದ ಜನರು ಆತಂಕದಿಂದಲೇ ದಿನ ಕಳೆಯುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು