9:04 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅಯನಾ ವಿ. ರಮಣ್ ಗೆ ಅವಳಿ ಡಿಸ್ಟಿಂಕ್ಷನ್ : ಕಲಿಕೆಗೂ ಜೈ, ಭರತನಾಟ್ಯಕ್ಕೂ ಸೈ!

29/03/2022, 22:33

ಮೂಡುಬಿದಿರೆ(reporterkarnataka.com) : ಇಲ್ಲಿನ ಬಹುಮುಖ ಪ್ರತಿಭೆಯ ಅಯನಾ ವಿ. ರಮಣ್ 2022 – 23ರ ಶೈಕ್ಷಣಿಕ ವರ್ಷದಲ್ಲಿ ಎರಡು ವಿಚಾರಗಳಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಅವಳಿ ಡಿಸ್ಟಿಂಕ್ಷನ್ ನ ಅಪರೂಪದ ಸಾಧನೆ ದಾಖಲಿಸಿದ್ದಾರೆ.

ವಿದುಷಿ ಶಾರದಾ ಮಣಿ ಶೇಖರ್ ಶಿಷ್ಯೆಯಾಗಿ , ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಡಳಿ ನಡೆಸುವ ಭರತ ನಾಟ್ಯದ ಅಂತಿಮ ವಿದ್ವತ್ ಪರೀಕ್ಷೆ ಯಲ್ಲಿ ಅತ್ಯುತ್ತಮವಾದ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

ಕೋವಿಡ್ ಕಾರಣದಿಂದಾಗಿ ತಡವಾಗಿ ಘೋಷಣೆಯಾದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಎರಡನೆ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಇದೀಗ ಪ್ರಕಟವಾಗಿದ್ದು ಅಯನಾ ಅದರಲ್ಲೂ ಡಿಸ್ಟಿಂಕ್ಷನ್ ಸಾಧಿಸಿದ್ದಾರೆ.

ಭರತ ನಾಟ್ಯದ ಸಾಧನೆಗಾಗಿ ಕೇಂದ್ರ ಸರಕಾರದ ಸಿ ಸಿ ಆರ್ ಟಿ ಸ್ಕಾಲರ್ಶಿಪ್ ಪಡೆಯುತ್ತಿರುವ ಅಯನಾ , ಪದವಿ ಕಲಿಕೆಗಾಗಿಯೂ ಶೈಕ್ಷಣಕ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ.

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ದ್ವಿತೀಯ ಕಲಾ ಪದವಿ ವಿದ್ಯಾರ್ಥಿಯಾಗಿರುವ ಅಯನಾ. ವಿ.ರಮಣ್ ಅವರು, ಕಲಾವಿದ ಕೆ. ವಿ. ರಮಣ್ – ಆಳ್ವಾಸ್ ಉಪನ್ಯಾಸಕಿ ಡಾ. ಮುಕಾಂಬಿಕಾ ಜಿ. ಎಸ್.ದಂಪತಿಯ ಪುತ್ರಿ.

ಬೆಂಗಳೂರಿನ ವಿದ್ವಾನ್ ಸತ್ಯನಾರಾಯಣರಾಜು ಅವರಲ್ಲಿ ಭರತನಾಟ್ಯದ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ , ತನ್ನ ಎಂಟನೇ ತರಗತಿಯಿಂದಲೇ ಆಳ್ವಾಸ್ ದತ್ತು ಸ್ವೀಕಾರದ ವಿದ್ಯಾರ್ಥಿಯಾಗಿರುವುದನ್ನು ಇಲ್ಲಿ ನೆನಪಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು