7:27 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಭೂಮಾಫಿಯಾಗೆ ಕಂದಾಯ ಸಚಿವ ಆರ್‌. ಅಶೋಕ್‌ ರಕ್ಷಣೆ:  ಆಮ್‌ ಆದ್ಮಿ ಪಾರ್ಟಿ ಆರೋಪ

30/03/2022, 12:08

ಬೆಂಗಳೂರು(reporterkarnataka.com): ಬೆಂಗಳೂರಿನ ಭೂಮಾಫಿಯಾಗೆ ಕಂದಾಯ ಸಚಿವ ಆರ್‌.ಅಶೋಕ್‌ ಬೆನ್ನೆಲುಬಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅವರು ರಕ್ಷಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ವಕೀಲರ ಘಟಕದ ಅಧ್ಯಕ್ಷ ಮಂಜುನಾಥ್‌ ಸ್ವಾಮಿ, “ಬೆಂಗಳೂರು ದಕ್ಷಿಣದ ಉಪವಿಭಾಗಾಧಿಕಾರಿ ಎಂ.ಜಿ.ಶಿವಣ್ಣ ಹಾಗೂ ತಹಸೀಲ್ದಾರ್‌ ಶಿವಪ್ಪ ಲಮಾಣಿಯವರು ಮುನಿರಾಜು ಹಾಗೂ ಇತರೆ ಭೂಗಳ್ಳರ ಜೊತೆಗೂಡಿ ಅಕ್ರಮ ಎಸಗಿದ್ದಾರೆ. ಕಾನೂನುಬಾಹಿರವಾಗಿ ಮನೆ ಹಾಗೂ ಮಳಿಗೆಗಳನ್ನು ಕಡೆವಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡತೋಗುರು ಗ್ರಾಮದ ಸರ್ವೇ ನಂಬರ್‌ 152/1ರಲ್ಲಿ ಈ ಘಟನೆ ನಡೆದಿದೆ. ಪ್ರಕರಣದ ಸಂತ್ರಸ್ತರು ಹೈಕೋರ್ಟ್‌ ಮೆಟ್ಟಿಲೇರಿದಾಗ,  ಇಬ್ಬರು ಅಧಿಕಾರಿಗಳು ಅಕ್ರಮ ಎಸಗಿರುವುದು ಸಾಬೀತಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ. ಆದರೆ ಕಂದಾಯ ಸಚಿವ ಆರ್‌.ಅಶೋಕ್‌ರವರ ಪ್ರಭಾವದಿಂದಾಗಿ ತಪ್ಪಿತಸ್ಥ ಅಧಿಕಾರಿಗಳಿಗೆ ಯಾವುದೇ ಶಿಕ್ಷೆಯಾಗಿಲ್ಲ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಮಾತನಾಡಿ, “ಆರ್‌.ಅಶೋಕ್‌ರವರು ಸಚಿವರಾದಾಗಿನಿಂದ ಬೆಂಗಳೂರಿನಲ್ಲಿ ಭೂಮಾಫಿಯಾ ಹಾವಳಿ ಜಾಸ್ತಿಯಾಗುತ್ತಿದೆ. ಅಕ್ರಮವಾಗಿ ಜಮೀನನ್ನು ವಶಪಡಿಸಿಕೊಳ್ಳುವುದು, ಬೆದರಿಕೆ ಒಡ್ಡಿ ಒಕ್ಕಲೆಬ್ಬಿಸುವುದು ಮುಂತಾದ ಅಕ್ರಮಗಳು ಎಗ್ಗಿಲ್ಲದೇ ಸಾಗುತ್ತಿವೆ. ಕಂದಾಯ ಇಲಾಖೆಯ ಅಧಿಕಾರಿಗಳೇ ಭೂಮಾಫಿಯಾಗೆ ಸಹಕಾರ ನೀಡುತ್ತಿದ್ದಾರೆ. ಇದರಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಸಾಮಾನ್ಯ ಜನರು ಆತಂಕದಲ್ಲಿ ಬದುಕುವಂತಾಗಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ಕಾರ್ತಿಕೇಯ, ಗುರುಪ್ರಸಾದ್‌, ಸೆಂತಿಲ್‌ ಕುಮಾರ್‌, ತೇಜಸ್ವಿನಿ, ವರ್ಷಿಕಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು