12:04 PM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಸ್ವಂತ ಬಲದಿಂದ ಗೆಲ್ಲೋರಿಗೆ ಬಿಜೆಪಿ ಮೊದಲ ಆದ್ಯತೆ: ಮಿಕ್ಕ ಅಭ್ಯರ್ಥಿಗಳಿಗೆ ಕೋಕ್ ಸಾಧ್ಯತೆ

30/03/2022, 23:16

ಹೊಸದಿಲ್ಲಿ(reporterkarnataka.com): ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್‌ನ ಮುಂದಿನ ಟಾರ್ಗೆಟ್ ಗುಜರಾತ್ ಮತ್ತು ಕರ್ನಾಟಕ ಆಗಿದ್ದು ಈ ವರ್ಷದ ಅಂತ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ತಯಾರಿ ನಡೆಸಿದ್ದು, ರಾಜ್ಯ ಬಿಜೆಪಿಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಕುದುರೆಗಳೆಷ್ಟು? ಬಿಜೆಪಿ ಸಿಂಬಲ್‌ನಿಂದ ಗೆಲ್ಲುವವರು ಯಾರು? ಸಿಂಬಲ್ ಮತ್ತು ಸ್ವಂತ ಬಲ ಎರಡೂ ಸೇರಿ ಗೆಲ್ಲುವವರು ಎಷ್ಟು? ಎಂಬುದರ ಬಗ್ಗೆ ರಹಸ್ಯ ಸರ್ವೇ ಮಾಡಲು ಬಿಜೆಪಿ ಹೈಕಮಾಂಡ್ ಅಖಾಡಕ್ಕೆ ಇಳಿದಿದೆ ಎನ್ನಲಾಗಿದೆ.

ಏಪ್ರಿಲ್, ಮೇ, ಜೂನ್ ಮೂರು ತಿಂಗಳು ಮೂರು ಗುಪ್ತ ಸರ್ವೇ ನಡೆಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಜುಲೈ ಅಂತ್ಯದ ವೇಳೆಗೆ ಸಂಭವನೀಯ ಪಟ್ಟಿಯಲ್ಲಿ ಯಾರು ಮುಂದೆ, ಯಾರು ಹಿಂದೆ ಇರ್ತಾರೆ ಎಂಬ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಗೆ 11 ತಿಂಗಳು ಬಾಕಿ ಇರುವ ಮೊದಲೇ ಬಿಜೆಪಿ ಹೈಕಮಾಂಡ್‌ನಿಂದ ತಂತ್ರ ರೂಪಿಸಲಾಗುತ್ತಿದ್ದು, ಈಗಾಗಲೇ ಆರ್‌ಎಸ್‌ಎಸ್ ಮುಖಂಡರಿಂದಲೂ ಒಂದು ವರದಿ ರವಾನೆ ಆಗಿದೆ ಎನ್ನಲಾಗಿದೆ. ಸ್ವಂತ ಶಕ್ತಿಯಿಂದ ಗೆಲ್ಲುವವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡೋದು ಬೇಡ ಎಂದು ಆರ್‌ಎಸ್ಎಸ್ ಸಲಹೆ ನೀಡಿದೆ ಅಂತ ಮೂಲಗಳು ಮಾಹಿತಿ ನೀಡಿವೆ.

ಪಕ್ಷದ ಸಿಂಬಲ್‌ನಿಂದ ಗೆಲ್ಲುವ, ಗೆಲ್ಲುತ್ತಿರುವವರ ಆಯ್ಕೆ ವಿಚಾರದಲ್ಲಿ ಈ ಸಲ ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಪಕ್ಷ, ಸ್ವಂತ ಬಲ ಎರಡೂ ಸೇರಿಸಿ ಗೆಲ್ಲುವವರಿಗೆ ಟಿಕೆಟ್ ನೀಡುವಾಗ ಎಚ್ಚರ ವಹಿಸುವಂತೆಯೂ ಸಂಘದಿಂದ ಸಲಹೆ ರವಾನೆಯಾಗಿದೆ. ಹಾಗಾಗಿ ಈ ಮೂರು ಅಂಶಗಳನ್ನೊಳಗೊಂಡ ಮೂರು ಸರ್ವೇಗಳ ಬಳಿಕವಷ್ಟೇ ಸಂಭವನೀಯ ಟಿಕೆಟ್ ಪಟ್ಟಿ ರೆಡಿ ಮಾಡಲು ಪ್ಲಾನ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು