4:03 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅಂತರಗಂಗೆ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ: ಸಂಭ್ರಮದ ಸಮಾಪನ

11/06/2021, 07:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ ಅತಿ ಸರಳ ಹಾಗೂ ವಿಜ್ರಂಭಣೆಯಿಂದ ಜರುಗಿತು.

ಕೋವಿಡ್ 19 ಅಲೆ ಇರುವುದರಿಂದ ಸರಕಾರದ ಆದೇಶದ ಪ್ರಕಾರ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಕಡಿಮೆ ಜನರ ಮಧ್ಯೆ ಸಡಗರ ಸಂಭ್ರಮದಿಂದ ಜಾತ್ರೆ ಮಾಡಲಾಯಿತು. ಈ ಭಾಗದ ಆರಾಧ್ಯ ದೈವ ದುರ್ಗಾದೇವಿ ಜಾತ್ರೆ ವಿಶೇಷವಾಗಿ ಐದು ವರ್ಷಕ್ಕೊಮ್ಮೆ ಆಗುತ್ತದೆ. 

ಪ್ರತಿವರ್ಷ ಬೇರೆ ಬೇರೆ ಜಿಲ್ಲೆಗಳಿಂದ ಬೇರೆ ಬೇರೆ ತಾಲೂಕುಗಳಿಂದ ಭಕ್ತರು ಆಗಮಿಸುತ್ತಿದ್ದರು. ಆದರೆ ಲಾಕ್ ಡೌನ್ ಇರುವುದರಿಂದ ಭಕ್ತಾದಿಗಳಿಗೆ ದೂರದಿಂದ ಬರುವವರಿಗೆ ಮನಸ್ಸಿನಲ್ಲಿ ದೇವರನ್ನು ಪ್ರಾರ್ಥಿಸಿ ಮನೆಯಲ್ಲಿ ಜಾತ್ರೆ ಮಾಡಿ ಎಂದು ಸ್ವಾಮೀಜಿ  ತಿಳಿಸಿದ್ದರು. ಈ ಜಾತ್ರೆಯು 7 ಗ್ರಾಮಗಳ ಗೌಡರ ಬಂದಮೇಲೆ ಜಾತ್ರೆಯಂತೆ. ಬೈಲಗುಡ್ಡ, ಮೆದಿಕಲ್, ಮ್ಯಾದರಾಳ, ಅಂತರಗಂಗೆ ತಾಂಡ, ಅಂತರಗಂಗೆ, ನಾಗರಬೆಂಚಿ ಸುತ್ತಮುತ್ತಲ ಭಕ್ತಾದಿಗಳು ದುರ್ಗಾದೇವಿ ಕೃಪೆಗೆ ಪಾತ್ರರಾಗಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ.

ಅದ್ದೂರಿ ಸರಳ ರೀತಿಯ ಇಂದು ಜಾತ್ರೆ ನೆರವೇರಿತು. ಈ ಜಾತ್ರೆ ಬಳ್ಳಾರಿ ದುರ್ಗಮ್ಮ ಬಂದು ಇಲ್ಲಿ ನಡೆಸಿದ್ದಾಳೆ ಎಂದು ಮೂಲ ಇತಿಹಾಸದಲ್ಲಿ ಇದೆ. ಈ ಗುಡಿಯ ಮುಂದೆ ಬೇವಿನ ಗಿಡ 120 ವರ್ಷ ಹಳೆಯದಾಗಿದೆ.ಅಪರೂಪದ ಆ ಗಿಡವನ್ನು ದೇವಿ ಕಾಪಾಡಿಕೊಂಡು ಬಂದಿದ್ದಾಳೆಂದು ಹಿರಿಯರು ಹೇಳುತ್ತಾರೆ. ಬಳ್ಳಾರಿ ದುರ್ಗಮ್ಮ ಲಿಂಗಸುಗೂರು ಕೋರ್ಟಿನಲ್ಲಿ ಒಂದು ಕುರ್ಚಿ ದುರ್ಗಾ ಮಳೆಗಾಗಿ ಖಾಲಿ ಇದೆ ಎಂದು ಇತಿಹಾಸದಲ್ಲಿದೆ 


ಅಂತರಗಂಗೆ ಅಮರಪ್ಪ ಸಾಹುಕಾರ್ ರಾಯಚೂರಿನ ವಾಸವಾಗಿರು ಅವರು ಈಗ ನೇತಾಜಿ ಪಟೇಲ್ ಬಜಾರ್ ಬಂಗಾರದ ಅಂಗಡಿ ನಡೆಸುತ್ತಾ ಇದ್ದಾರೆ. ಅವರ ತಂದೆ ಅಮರಪ್ಪ ಸೌಕಾರ್ ದುರ್ಗಾದೇವಿ ಕನಸಿನಲ್ಲಿ ಬಂದು ನನಗೆ ಇರಲು ಗುಡಿ ಕಟ್ಟಿಸಿ ಕೊಡು ಎಂದು ಹೇಳಿ ಅದೃಶ್ಯಳಾದಳು. ದೇವಿ ಹೇಳಿದ ಪ್ರಕಾರ ಅವರು ಗುಡಿ ಕಟ್ಟಿ ಕೊಟ್ಟರು.

ಕ್ರಮೇಣ ಒಂದು ಸಮಯದಲ್ಲಿ ಅವರಿಗೆ ಆಕ್ಸಿಡೆಂಟ್ ಆದಾಗ ಸ್ಥಳದಲ್ಲಿ ಯಾರು ಇರಲಿಲ್ಲ. ಆ ವೇಳೆ ಈ ದುರ್ಗಮ್ಮ ಕರೆದುಕೊಂಡು ಆಸ್ಪತ್ರೆ ಚಿಕಿತ್ಸೆ ಬಂದು ಆರಾಮ್ ಆಗುತ್ತೆ ಏನು ಆಗುವುದಿಲ್ಲ ಎಂದು ಅದೃಶ್ಯಳಾದಳು ಎಂಬ ಐತಿಹ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು