12:10 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅಂತರಗಂಗೆ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ: ಸಂಭ್ರಮದ ಸಮಾಪನ

11/06/2021, 07:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ ಅತಿ ಸರಳ ಹಾಗೂ ವಿಜ್ರಂಭಣೆಯಿಂದ ಜರುಗಿತು.

ಕೋವಿಡ್ 19 ಅಲೆ ಇರುವುದರಿಂದ ಸರಕಾರದ ಆದೇಶದ ಪ್ರಕಾರ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಕಡಿಮೆ ಜನರ ಮಧ್ಯೆ ಸಡಗರ ಸಂಭ್ರಮದಿಂದ ಜಾತ್ರೆ ಮಾಡಲಾಯಿತು. ಈ ಭಾಗದ ಆರಾಧ್ಯ ದೈವ ದುರ್ಗಾದೇವಿ ಜಾತ್ರೆ ವಿಶೇಷವಾಗಿ ಐದು ವರ್ಷಕ್ಕೊಮ್ಮೆ ಆಗುತ್ತದೆ. 

ಪ್ರತಿವರ್ಷ ಬೇರೆ ಬೇರೆ ಜಿಲ್ಲೆಗಳಿಂದ ಬೇರೆ ಬೇರೆ ತಾಲೂಕುಗಳಿಂದ ಭಕ್ತರು ಆಗಮಿಸುತ್ತಿದ್ದರು. ಆದರೆ ಲಾಕ್ ಡೌನ್ ಇರುವುದರಿಂದ ಭಕ್ತಾದಿಗಳಿಗೆ ದೂರದಿಂದ ಬರುವವರಿಗೆ ಮನಸ್ಸಿನಲ್ಲಿ ದೇವರನ್ನು ಪ್ರಾರ್ಥಿಸಿ ಮನೆಯಲ್ಲಿ ಜಾತ್ರೆ ಮಾಡಿ ಎಂದು ಸ್ವಾಮೀಜಿ  ತಿಳಿಸಿದ್ದರು. ಈ ಜಾತ್ರೆಯು 7 ಗ್ರಾಮಗಳ ಗೌಡರ ಬಂದಮೇಲೆ ಜಾತ್ರೆಯಂತೆ. ಬೈಲಗುಡ್ಡ, ಮೆದಿಕಲ್, ಮ್ಯಾದರಾಳ, ಅಂತರಗಂಗೆ ತಾಂಡ, ಅಂತರಗಂಗೆ, ನಾಗರಬೆಂಚಿ ಸುತ್ತಮುತ್ತಲ ಭಕ್ತಾದಿಗಳು ದುರ್ಗಾದೇವಿ ಕೃಪೆಗೆ ಪಾತ್ರರಾಗಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುತ್ತಾರೆ.

ಅದ್ದೂರಿ ಸರಳ ರೀತಿಯ ಇಂದು ಜಾತ್ರೆ ನೆರವೇರಿತು. ಈ ಜಾತ್ರೆ ಬಳ್ಳಾರಿ ದುರ್ಗಮ್ಮ ಬಂದು ಇಲ್ಲಿ ನಡೆಸಿದ್ದಾಳೆ ಎಂದು ಮೂಲ ಇತಿಹಾಸದಲ್ಲಿ ಇದೆ. ಈ ಗುಡಿಯ ಮುಂದೆ ಬೇವಿನ ಗಿಡ 120 ವರ್ಷ ಹಳೆಯದಾಗಿದೆ.ಅಪರೂಪದ ಆ ಗಿಡವನ್ನು ದೇವಿ ಕಾಪಾಡಿಕೊಂಡು ಬಂದಿದ್ದಾಳೆಂದು ಹಿರಿಯರು ಹೇಳುತ್ತಾರೆ. ಬಳ್ಳಾರಿ ದುರ್ಗಮ್ಮ ಲಿಂಗಸುಗೂರು ಕೋರ್ಟಿನಲ್ಲಿ ಒಂದು ಕುರ್ಚಿ ದುರ್ಗಾ ಮಳೆಗಾಗಿ ಖಾಲಿ ಇದೆ ಎಂದು ಇತಿಹಾಸದಲ್ಲಿದೆ 


ಅಂತರಗಂಗೆ ಅಮರಪ್ಪ ಸಾಹುಕಾರ್ ರಾಯಚೂರಿನ ವಾಸವಾಗಿರು ಅವರು ಈಗ ನೇತಾಜಿ ಪಟೇಲ್ ಬಜಾರ್ ಬಂಗಾರದ ಅಂಗಡಿ ನಡೆಸುತ್ತಾ ಇದ್ದಾರೆ. ಅವರ ತಂದೆ ಅಮರಪ್ಪ ಸೌಕಾರ್ ದುರ್ಗಾದೇವಿ ಕನಸಿನಲ್ಲಿ ಬಂದು ನನಗೆ ಇರಲು ಗುಡಿ ಕಟ್ಟಿಸಿ ಕೊಡು ಎಂದು ಹೇಳಿ ಅದೃಶ್ಯಳಾದಳು. ದೇವಿ ಹೇಳಿದ ಪ್ರಕಾರ ಅವರು ಗುಡಿ ಕಟ್ಟಿ ಕೊಟ್ಟರು.

ಕ್ರಮೇಣ ಒಂದು ಸಮಯದಲ್ಲಿ ಅವರಿಗೆ ಆಕ್ಸಿಡೆಂಟ್ ಆದಾಗ ಸ್ಥಳದಲ್ಲಿ ಯಾರು ಇರಲಿಲ್ಲ. ಆ ವೇಳೆ ಈ ದುರ್ಗಮ್ಮ ಕರೆದುಕೊಂಡು ಆಸ್ಪತ್ರೆ ಚಿಕಿತ್ಸೆ ಬಂದು ಆರಾಮ್ ಆಗುತ್ತೆ ಏನು ಆಗುವುದಿಲ್ಲ ಎಂದು ಅದೃಶ್ಯಳಾದಳು ಎಂಬ ಐತಿಹ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು