11:32 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ: ಉದ್ಯೋಗದ ಬಗ್ಗೆ  ಹೆಚ್ಚಿನ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿ ಸೂಚನೆ

30/03/2022, 23:57

ಮಂಗಳೂರು(reporterkarnataka.com): ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಜಿಲ್ಲಾ ಸಲಹಾ ಸಮಿತಿ 2021 2022 ನೇ ಸಾಲಿನ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ವಹಿಸಿದ್ದರು, ನೆಹರು ಯುವ ಕೇಂದ್ರ 2021-2022 ನೇ ಸಾಲಿನ ಕಾರ್ಯಚಟುವಟಿಕೆಗಳ ವರದಿ ಮಂಡನೆಯನ್ನು  ಮಂಗಳೂರು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್‌ ಸೂಟರ್‌ಪೇಟೆ ನಡೆಸಿದರು.

ಜಿಲ್ಲಾಧಿಕಾರಿ ಮಾತನಾಡಿ, ನೆಹರು ಯುವ ಕೇಂದ್ರದ ಮಂಗಳೂರು ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಹಾಗೂ ಆರೋಗ್ಯ ಕೌಶಲ್ಯ ಅಭಿವೃದ್ಧಿ ಉದ್ಯೋಗ ಮತ್ತು ಪರಿಸರ ಸಂರಕ್ಷಣೆ, ಹಾಗೂ ಯುವಜನರಿಗೆ ಉದ್ಯೋಗದ ಬಗ್ಗೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ನಡೆಸುವಂತೆ ತಿಳಿಸಿದರು.

ಲೀಡ್ ಬ್ಯಾಂಕ್ ಆಫೀಸರ್ ಪ್ರವೀಣ್ ಅವರು ಡಿಜಿಟಲ್ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಡಾ.ಕಿಶೋರ್ (ವೈದ್ಯಾಧಿಕಾರಿಗಳು),  ವಿವೇಕಾನಂದ ಜಿ (ಉಪನಿರ್ದೇಶಕರು ಡಿ.ಐ.ಸಿ), ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ., ಎನ್.ಸಿಸಿ ಅಧಿಕಾರಿ ವಿಠಲ್,  ಲೀಡ್ ಬ್ಯಾಂಕ್ ಚೀಫ್ ಮ್ಯಾನೇಜರ್ ಪ್ರವೀಣ್ ಎಮ್.ಪಿ, ಕನ್ನಡ ಜಿಲ್ಲಾ ಪಂಚಾಯತ್,ಸಹಾಯಕ ಯೋಜನಾಧಿಕಾರಿ ಸರೋಜಿನಿ,ಉಪನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರದೀಪ್ ಡಿ ಸೋಜಾ, ದ.ಕ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ, ದ. ಕ  ಜಿಲ್ಲಾ ವಾರ್ತಾ ಅಧಿಕಾರಿ ರವಿರಾಜ್, ಜಿಲ್ಲಾ ಯುವ ರೆಡ್ ಕ್ರಾಸ್ ಕಾರ್ಯದರ್ಶಿ ಕುಸುಮ ತಾರ ಬಿ.ಕೆ, ದ. ಕ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ, ಎಸ್ ಜಿ ಹೇಮಚಂದ್ರ, ಪರಿಸರವಾದಿ ಜಿತ್ ಮಿಲನ್ ರೋಚ್,  ನೆಹರು ಯುವ ಕೇಂದ್ರ ದ ಜಗದೀಶ್ ಕೆ.ಎ, ನೆಹರು ಯುವ ಕೇಂದ್ರದ ಯುವ ಪ್ರತಿನಿಧಿಗಳಾದ  ಪ್ರೀತೇಶ್, ಸುಶ್ಮಿತಾ ಬಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು