4:23 PM Friday9 - May 2025
ಬ್ರೇಕಿಂಗ್ ನ್ಯೂಸ್
J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

ಇತ್ತೀಚಿನ ಸುದ್ದಿ

“ಎ2 ಒರಿಜಿನಲ್ಸ್” ಹೊಸ ಪ್ರಯೋಗ: ‘ಮನಸೆಲ್ಲಾ ನೀನೇ’  ಆಲ್ಬಂ ಹಾಡು ಬಿಡುಗಡೆ

31/03/2022, 21:34

ಬೆಂಗಳೂರು(reporterkarnataka.com): ಜಗತ್ತು ಡಿಜಿಟಲ್ ಯುಗಕ್ಕೆ ತನ್ನನ್ನು ತಾನು ಒಗ್ಗಿಕೊಳ್ಳುತ್ತಿದ್ದಂತೆ  ಜಗತ್ತಿನ ವಿದ್ಯಮಾನ ಬೆರಳ ತುದಿಗೆ ಬಂದು ನಿಂತಿದೆ. ಹೀಗಾಗಿ ಸಾಮಾಜಿಕ ಜಾಲ ತಾಣ ಮತ್ತು ವೆಬ್ ದುನಿಯಾದೇ ಹವಾ. 

ಈಗಿನ ಆಧುನಿಕ ಕಾಲಕ್ಕೆ ತಕ್ಕಂತೆ ಹೊಸ ಪ್ರಯೋಗಗಳಿಗೆ ಒಗ್ಗಿಕೊಳ್ಳಲು”ಎ2 ಒರಿಜಿನಲ್ಸ್” ಹೊಸ ಪ್ರಯೋಗಕ್ಕೆ ಮುಂದಾಗಿದೆ. ಹೊಸ ಆಡಿಯೋ ವೀಡಿಯೋ ದೃಶ್ಯವೈಭವಗಳು ಜನರನ್ನು ತಲುಪುತ್ತಿರುವ ಕಾಲಘಟ್ಟದಲ್ಲಿ “ಎ2 ಒರಿಜಿನಲ್ಸ್” ಸಂಸ್ಥೆ ಅದಕ್ಕೆಲ್ಲ ಭಿನ್ನ ಎನ್ನುವಂತೆ ಹೊಸ ಆಡಿಯೋ ಆಲ್ಬಂ ಹೊರತಂದಿದೆ. “ಎ2 ಸಂಸ್ಥೆ” ನಿರ್ಮಾಣ ಮಾಡಿರುವ ಮನಸೆಲ್ಲಾ ನೀನೇ ಎಂಬ ಆಲ್ಬಂ ಹಾಡಿನ ದೃಶ್ಯ ವೈಭವ ಎ2 ಒರಿಜಿನಲ್ಸ್ ನಲ್ಲಿ ಮಾರ್ಚ್ 31 ರಂದು ಲೋಕಾರ್ಪಣೆಯಾಯಿತು.

ಆಡಿಯೋ ವಿಡಿಯೋ ಆಲ್ಬಂ ಅನ್ನು ಯುವ ಪ್ರತಿಭೆ ವಿಸ್ಮಯ ಜಗ ನಿರ್ದೇಶನದ ಜೊತೆಗೆ, ಸಾಹಿತ್ಯ ಹಾಗೂ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಆಲ್ಬಂನ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು ಪೂರ್ತಿ ವೀಡಿಯೋ ಎ2 ಎಂಟರ್ ಟೈನ್ ಮೆಂಟ್ ಯುಟ್ಯೂಬ್ ಚಾನಲ್ ಬಿಡುಗಡೆಯಾಗಿದ್ದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ ಎನ್ನುತ್ತಾರೆ ಎ2 ಒರಿಜಿನಲ್ಸ್ ಎಕ್ಸಿಕ್ಯೂಟಿವ್ ನ ಪ್ರವೀಣ್‌ ಟಿ ಪಿ.

ಮನಸೆಲ್ಲಾ ನೀನೇ ಆಡಿಯೋ ಆಲ್ಬಂನಲ್ಲಿ ಧನುಷ್ ಹಾಗೂ ರೋಷಿಣಿ ಪ್ರಕಾಶ್ ಮುಖ್ಯಭೂಮಿಕೆಯಲ್ಲಿದ್ದಾರೆ.  ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕಲಾವಿದರು. ನಟನೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ.  ಪ್ರತೀ ಫ್ರೇಮ್ ನಲ್ಲೂ ಸಾಕಷ್ಟು ಸ್ಕೋರ್ ಮಾಡಿದ್ದಾರೆ. ವಿಶೇಷ ಪಾತ್ರದಲ್ಲಿ ಪುಟಾಣಿ ಧ್ರುತಿ ಕಾಣಿಸಿಕೊಂಡಿದ್ದು, ಆ ಪಾತ್ರ ಯಾವುದು ಎನ್ನುವ ಬಗ್ಗೆ ಕುತೂಹಲ ಹೆಚ್ಚಾಗಿದೆ. ಆಲ್ಬಂ ಗೀತೆಯನ್ನು ಸತ್ಯ ರಾಧಾಕೃಷ್ಣ ಸುಮಧುರವಾಗಿ ಹಾಡಿದ್ದಾರೆ.  ಸತೀಶ್ ರಾಜೇಂದ್ರ ಛಾಯಾಗ್ರಹಣ, ರಿಯಾಸ್ ಸಂಕಲನವಿದೆ.  

ಎ2 ಒರಿಜಿನಲ್ಸ್ ನಿಂದ ಮುಂಬರುವ ದಿನಗಳಲ್ಲಿ ಇನ್ನಷ್ಟು ಹೊಸ ಪ್ರಯತ್ನಕ್ಕೆ ಸಂಸ್ಥೆ ಮುಂದಾಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕಿ ವಾಣಿ ಪ್ರಸಾದ್‌ ತಿಳಿಸಿದರು. ಎ2 ಎಂಟರ್ ಟೈನ್ ಮೆಂಟ್ ಯುಟ್ಯೂಬ್ ಚಾನಲ್ ನಲ್ಲಿ  ಮಾರ್ಚ್ 31, ಬೆಳಗ್ಗೆ 11ಗಂಟೆಗೆ ಬಿಡುಗಡೆಯಾಗಿದ್ದು, ಇದನ್ನ ಈ ಲಿಂಕ್‌ ಬಳಸಿ ನೋಡಿಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು