9:51 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

01/04/2022, 10:28

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಅವಧಿಗೆ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಯೋಚನೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಗುಜರಾತ್ ಚುನಾವಣೆಯ ಜೊತೆಗೆ ಕರ್ನಾಟಕದ ಚುನಾವಣೆಯೂ ನಡೆಯಲಿದೆ . ಬೊಮ್ಮಾಯಿ ಸರ್ಕಾರ ಅವಧಿಗೆ ಪೂರ್ಣ ಚುನಾವಣೆಗೆ ಹೋಗುತ್ತದೆ ಎಂಬುವುದು ಕೇವಲ ಊಹಾಪೋಹಗಳು ಎಂದು ಅವರು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುವ ಹಿನ್ನೆಲೆ ರಾಜ್ಯಕ್ಕೆ ಬಂದಿರುವ ಅರುಣ್ ಸಿಂಗ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಆಲೋಚನೆಯೂ ಇಲ್ಲ. ಸದ್ಯ ಯಾವ ರೀತಿಯಲ್ಲಿ ಇದೆಯೋ ಅದೇ ಮಾದರಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಸ್ಪಷ್ಟಪಸಿದರು.

ರಾಜ್ಯದಲ್ಲಿ ಬಿಜೆಪಿ ನಾಯಕರು ಲೋಕಪ್ರಿಯರಿದ್ದಾರೆ, ಜನಪ್ರಿಯರಿದ್ದಾರೆ. ಬೊಮ್ಮಾಯಿಯವರು ತಮ್ಮ ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ‌ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದರು.

ರಾಹುಲ್‌ಗಾಂಧಿ ಧೈರ್ಯ ಮೆಚ್ಚಬೇಕು.ರಾಹುಲ್ ಗಾಂಧಿ ರಾಜ್ಯ ಭೇಟಿ ಕುರಿತು ಮಾತನಾಡಿದ ಅರುಣ್‌ಸಿಂಗ್, ದೇಶಾದ್ಯಂತ ಕಾಂಗ್ರೆಸ್ ಸೋಲುತ್ತಿದೆ. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ. ಸೋಲಾಗುತ್ತೆ ಅಂತ ಗೊತ್ತಿದ್ದರೂ ರಾಹುಲ್ ಗಾಂಧಿ ಇಲ್ಲಿಗೆ ಬರೋ ಧೈರ್ಯ ತೋರಿಸಿರೋದು ಮೆಚ್ಚಬೇಕಾದದ್ದೇ ಎಂದು ವ್ಯಂಗ್ಯವಾಡಿದರು.

ಬಹಳ ಧೈರ್ಯದಿಂದ ರಾಹುಲ್ ಗಾಂಧಿ ಇಲ್ಲಿಗೆ ಬಂದಿದ್ದಾರೆ. ಅವರು ಬಂದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿ. ಆದರೆ, ಅವರ ನೇತೃತ್ವದಲ್ಲಿ ಯಾವುದೂ ನೆಟ್ಟಗೆ ನಡೀತಿಲ್ಲ, ಅವರಿಂದ ಹೊಸದೇನನ್ನೂ ಮಾಡುವುದಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ದೇಶದಲ್ಲಿ ಎಲ್ಲಾ ಕಡೆ ಸೋಲುತ್ತದೆ. ಅದರಂತೆ ಮುಂದೆ ಕರ್ನಾಟಕದಲ್ಲಿಯೂ ಸೋಲುತ್ತದೆ ಎಂದು ಭವಿಷ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು