3:59 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ತುಮಕೂರು: 115 ಮಕ್ಕಳಿಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ

01/04/2022, 17:26

ತುಮಕೂರು(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್ಕೆ ಆಗಮಿಸಿ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು. ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. 

ಬೀದರ್, ರಾಯಚೂರು ಸೇರಿದಂತೆ ಎಲ್ಲ ಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಡ ಮಕ್ಕಳಿಗೆ ನಾಮಕರಣ ಮಾಡುವ ಮೂಲಕ ಮಕ್ಕಳಿಗೆ ಬೇಕಾದ ಎಲ್ಲ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅನ್ನದಾನ ಸೇವಾ ಟ್ರಸ್ಟ್ ಅಧ್ಯಕ್ಷ  ಜಯಣ್ಣ ಹೇಳಿದರು.

ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯ ಹೆಸರು ನಾಮಕರಣ ಮಾಡುವ ಮೂಲಕ ಸ್ವಾಮೀಜಿಯ ಹೆಸರನ್ನು ಎಲ್ಲ ಕಡೆ ಹರಡುವ ಕೆಲಸ ಮಾಡಲಾಗುತ್ತಿದೆ. ಕಳೆದು 3 ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್‌ನ ಸದಸ್ಯೆ ಅನುರಾಧ ವಿ.ಪಾಟೀಲ್ 

ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು