6:02 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ವಿಶ್ವನಾಥ ಶೆಟ್ಟಿ ಪುತ್ರನ ಓದಿನ ಜವಾಬ್ದಾರಿ ವಹಿಸಿಕೊಂಡ ಅಶ್ವಿನಿ: ಹರ್ಷನ ಸಹೋದರಿಯಿಂದ ವಿಶಿಷ್ಟ ಕೊಡುಗೆ

01/04/2022, 19:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವಮೊಗ್ಗದಲ್ಲಿ ಕೊಲೆಯಾದ ಭಜರಂಗ ದಳ ಕಾರ್ಯಕರ್ತ ಹರ್ಷನ ಸಹೋದರಿ 2015ರಲ್ಲಿ ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಮತ್ತೋರ್ವ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಅವರ ಮಗ ಯಶಸ್ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ.

ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿಯ ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. 2015ರ ಫೆಬ್ರವರಿ 19ರಂದು ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು. ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದನು. ಇಂದು ಅವರ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ ಆ ಬಾಲಕ ಓದಿನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನ ನೋಡಿಕೊಳ್ಳುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು