6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವಿಶ್ವನಾಥ ಶೆಟ್ಟಿ ಪುತ್ರನ ಓದಿನ ಜವಾಬ್ದಾರಿ ವಹಿಸಿಕೊಂಡ ಅಶ್ವಿನಿ: ಹರ್ಷನ ಸಹೋದರಿಯಿಂದ ವಿಶಿಷ್ಟ ಕೊಡುಗೆ

01/04/2022, 19:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವಮೊಗ್ಗದಲ್ಲಿ ಕೊಲೆಯಾದ ಭಜರಂಗ ದಳ ಕಾರ್ಯಕರ್ತ ಹರ್ಷನ ಸಹೋದರಿ 2015ರಲ್ಲಿ ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಮತ್ತೋರ್ವ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಅವರ ಮಗ ಯಶಸ್ ಓದಿನ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ.

ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿಯ ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. 2015ರ ಫೆಬ್ರವರಿ 19ರಂದು ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು. ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದನು. ಇಂದು ಅವರ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ ಆ ಬಾಲಕ ಓದಿನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನ ನೋಡಿಕೊಳ್ಳುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು