6:40 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

01/04/2022, 23:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ದೇವರಮನೆ ರಸ್ತೆಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ದೇವರಮನೆಗೆ ಹೋಗಿ ಹಿಂದಿರುಗುತ್ತಿದ್ದ ಪ್ರಯಾಣಿಕರೊಬ್ಬರು ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಬಕ್ಕಿ ಗ್ರಾಮದ ಸುರೇಂದ್ರ ಎಂಬುವವರು ಕುಟುಂಬದವರೊಂದಿಗೆ ದೇವರಮನೆ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಕಾರಿನ ಹೆಡ್‍ಲೈಟ್ ಆಪ್ ಮಾಡಿ ಕಾರನ್ನು ಕೆಲಕಾಲ ರಸ್ತೆಯಲ್ಲೆ ನಿಲ್ಲಿಸಿಕೊಂಡಿದ್ದಾರೆ. ಕಾಡಾನೆ ಕಾರಿನ ಸಮೀಪವೇ ಬಂದು ಕೆಲ ಕಾಲ ನಿಂತಿದ್ದು ನಂತರ ಕಾಡಿನ ಕಡೆಗೆ ಸಾಗಿದೆ. 

ದೇವರ ಮನೆ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು ರಾತ್ರಿ  ಸಮಯದಲ್ಲಿ ಸಂಚರಿಸಲು ಪ್ರಯಾಣಿಕರು ಭಯಪಡುವಂತಾಗಿದೆ. ಕಾಡಾನೆಯಿಂದ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು