1:40 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕನಿಷ್ಠ ಬೆಂಬಲ ಬೆಲೆ; ಕರ್ನಾಟಕಕ್ಕೆ ಬಾಕಿ ಮೊತ್ತ 902.86 ಕೋಟಿ ಸಬ್ಸಿಡಿ ಬಿಡುಗಡೆ: ಕೇಂದ್ರ ಸಚಿವೆ ಕರಂದ್ಲಾಜೆ

02/04/2022, 10:29

ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರಾಗಿ ಹಾಗೂ ಜೋಳ ಖರೀದಿಯ ಬಾಕಿ ಮೊತ್ತ 902.86 ಕೋಟಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕರ್ನಾಟಕ ರಾಜ್ಯದಲ್ಲಿ 2021-22ನೇ ಆರ್ಥಿಕ ವರ್ಷದಲ್ಲಿ ಒಟ್ಟು 5.02 ಲಕ್ಷ ಮೆಟ್ರಿಕ್ ಟನ್ ರಾಗಿ (4.26 ಲಕ್ಷ ಮೆ. ಟನ್) ಮತ್ತು ಜೋಳ (75,302 ಮೆ. ಟನ್) ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಿ, ಪಡಿತರ ವಿತರಣಾ ಪದ್ಧತಿಯಡಿ ಫಲಾನುಭವಿಗಳಿಗೆ ವಿತರಿಸಲು ಅನುಮತಿ ನೀಡಿತ್ತು.

2021-22ರ ಆರ್ಥಿಕ ವರ್ಷದಲ್ಲಿ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ ಮಾಡಿ, ವಿತರಿಸಿದ ಧಾನ್ಯಗಳ ರಾಜ್ಯದ ಪಾಲಿನ ಬಾಕಿ ಇರುವ ಸಹಾಯಧನವನ್ನು ಬಿಡುಗಡೆಗೊಳಿಸುವಂತೆ ಕೋರಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಇಲಾಖೆಯ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಮಾ. 29ರಂದು ಪತ್ರವನ್ನು ಬರೆದಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಕೋರಿಕೆಯನ್ನು ಪರಿಗಣಿಸಿದ ಕೇಂದ್ರ ಸರಕಾರ, ಮಾ. 30ರಂದು ಕರ್ನಾಟಕ ರಾಜ್ಯದ ರಾಗಿ ಹಾಗೂ ಜೋಳ ಖರೀದಿಯ ಬೆಂಬಲ ಬೆಲೆಯ ಬಾಕಿ ಮೊತ್ತ 902.86 ಕೋಟಿಗಳನ್ನು ತ್ವರಿತವಾಗಿ ಬಿಡುಗಡೆ ಮಾಡಿ ಆದೇಶಿಸಿದೆ.

ಕರ್ನಾಟಕದ ರೈತರ ಹಿತಾಸಕ್ತಿಯನ್ನು ಪರಿಗಣಿಸಿ, ಕೇಂದ್ರ ಸರಕಾರದಿಂದ ಸಹಾಯಧನವನ್ನು ಅತೀ ಶೀಘ್ರದಲ್ಲಿ ಬಿಡುಗಡೆಗೊಳಿಸಿದಕ್ಕೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಇಲಾಖಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಸಚಿವೆ ಶೋಭಾ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು