7:59 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಹಲಾಲ್ v/s ಜಟ್ಕಾ ಕಟ್ ವಿವಾದ: ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ

02/04/2022, 16:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ  ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಖಡಕ್ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ.

ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ.

ಪ್ರಾಣಿ ವಧೆಗೂ ಮುನ್ನ ಸ್ಟನಿಂಗ್ ಮಾಡಲು ಸೂಚನೆ ನೀಡಲಾಗಿದ್ದು, ಸ್ಟನ್ನಿಂಗ್ ಸಿಸ್ಟಮ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರಾಣಿ ಹತ್ಯೆಗೂ ಮುನ್ನಾ ಪ್ರಾಣಿಗಳಿಗೆ ಪ್ರಜ್ಞೆ ತಪ್ಪಿಸಬೇಕಾಗುತ್ತದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ‌ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು