12:56 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕೆಎಸ್‌ಒಯು: ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳ; 80ಕ್ಕೂ ಹೆಚ್ಚು ಕಂಪನಿಗಳ ಪಾಲ್ಗೊಳ್ಳುವಿಕೆ

03/04/2022, 09:05

ಮೈಸೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದೆ ಎಂದು ಮುಕ್ತ ವಿವಿ ಕುಲಪತಿ ಎಸ್.ವಿದ್ಯಾಶಂಕರ್ ತಿಳಿಸಿದರು.

ವಿವಿ ಆಡಳಿತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳುತ್ತಿದ್ದು, ತಾಂತ್ರಿಕ ಮತ್ತು  ತಾಂತ್ರಿಕೇತರ ವಿದ್ಯಾರ್ಥಿಗಳು ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು  ಹೇಳಿದರು.

ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಅಶ್ವಿನ್‌ಗೌಡ ಮಾತನಾಡಿ, ಉದ್ಯೋಗ ಮೇಳವು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಆಯ್ಕೆಯಾಗದವರಿಗೆ ತಮ್ಮ ಇಚ್ಛೆಯ ಅನುಸಾರವಾಗಿ ತರಬೇತಿ ನೀಡಿ ಉದ್ಯೋಗವನ್ನು ದೊರಕಿಸಿಕೊಡಲಾಗುವುದು. – ಹಾಗೆಯೇ ಸುತ್ತಮುತ್ತಲಿನ ಜಿಲ್ಲೆಗಳ ನಿರುದ್ಯೋಗಿಗಳಿಗೆ ಅವಕಾಶ ಮಾಡಿಕೊಡಲಾಗುವುದು. 6000 ಜನರಿಗೆ ಉದ್ಯೋಗ ನೀಡುವ ಭರವಸೆ ಇದೆ ಎಂದರು.ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಜಗನಾಥ್, ವಿವಿ ಪ್ಲೇಟ್‌ಮೆಂಟ್ ಆಫೀಸರ್ ಹೆಚ್‌.ಆರ್‌. ಪವಿತ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು