11:41 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ:  ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ

11/06/2021, 16:28

ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ.

ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲಂಕಾದಿಂದ ಭಾರತ ಪ್ರವೇಶಿಸಿದ್ದಾರೆ. ಪ್ರತಿಯೊಬ್ಬರಿಂದ 8-10 ಲಕ್ಷ ರೂ. ಏಜೆಂಟರು ಪಡೆದುಕೊಂಡಿದ್ದಾರೆ. ಭಾರತದ ಮೂಲಕ ಕೆನಡಾಕ್ಕೆ ಕಳುಹಿಸುವ ಭರವಸೆ ಇವರಿಗೆ ನೀಡಲಾಗಿತ್ತು.

ಮೊದಲಿಗೆ ಇವರನ್ನು ಕಳೆದ ತಿಂಗಳು ತಮಿಳುನಾಡಿಗೆ ಕರೆದು ತರಲಾಯಿತು. ಅಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಸುರಕ್ಷಿತವಲ್ಲ ಎಂದು ಮಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ತಪಾಸಣೆಯಿಲ್ಲದೆ ಅವರು ಹೇಗೆ ರಾಜ್ಯ ಪ್ರವೇಶಿಸಿದರು ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳೂರಿನ ಲಾಡ್ಜ್ ಮತ್ತು ಬಾಡಿಗೆ ಮನೆಯೊಂದರಲ್ಲಿ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು