6:13 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ:  ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ

11/06/2021, 16:28

ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ.

ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲಂಕಾದಿಂದ ಭಾರತ ಪ್ರವೇಶಿಸಿದ್ದಾರೆ. ಪ್ರತಿಯೊಬ್ಬರಿಂದ 8-10 ಲಕ್ಷ ರೂ. ಏಜೆಂಟರು ಪಡೆದುಕೊಂಡಿದ್ದಾರೆ. ಭಾರತದ ಮೂಲಕ ಕೆನಡಾಕ್ಕೆ ಕಳುಹಿಸುವ ಭರವಸೆ ಇವರಿಗೆ ನೀಡಲಾಗಿತ್ತು.

ಮೊದಲಿಗೆ ಇವರನ್ನು ಕಳೆದ ತಿಂಗಳು ತಮಿಳುನಾಡಿಗೆ ಕರೆದು ತರಲಾಯಿತು. ಅಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಸುರಕ್ಷಿತವಲ್ಲ ಎಂದು ಮಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ತಪಾಸಣೆಯಿಲ್ಲದೆ ಅವರು ಹೇಗೆ ರಾಜ್ಯ ಪ್ರವೇಶಿಸಿದರು ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳೂರಿನ ಲಾಡ್ಜ್ ಮತ್ತು ಬಾಡಿಗೆ ಮನೆಯೊಂದರಲ್ಲಿ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು