9:41 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಆಗಸದಲ್ಲಿ ಚಂದ್ರನ ಹುಡುಕುತ್ತಿದ್ದವರಿಗೆ ಕಾಣಿಸಿದ್ದು ಬೆಂಕಿಯ ಜ್ವಾಲೆ!:  ಏನಿದು ಜಲ್ವಿಸುತ್ತಾ ಹಾದು ಹೋಗಿದ್ದು?.!!

03/04/2022, 12:17

ಮಂಗಳೂರು(reporterkarnataka.com) ದೇಶದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದರ ನಡುವೆ ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಬೆಂಕಿಯ ಜ್ವಾಲೆಯೊಂದು ಸುಮಾರು ಹೊತ್ತು ಆಕಾಶದಲ್ಲಿ ಸಾಗಿದೆ.ಇದನ್ನ ಕಂಡವರು ಧೂಮಕೇತು ಇರಬೇಕು, ಹಬ್ಬದ ದಿನ ಅನಿಷ್ಟ ಕಂಡಂತಾಯ್ತು ಎಂಬಂತೆ ಮಾತನಾಡಿಕೊಂಡಿದ್ದಾರೆ.

ಬಳಿಕ ಅದು ಉಲ್ಕಾಪಾತ ಎಂದು ಹೇಳುವಂತಹ ಮಾತುಗಳು ಆರಂಭವಾಗಿದೆ. ಆದರೆ ಉಲ್ಕಾಪಾತದ ಬಣ್ಣ ಈ ರೀತಿಯಲ್ಲಿ ಇರುವುದಿಲ್ಲ ಎಂಬ ವಾದಗಳಿವೆ.

ಮಹಾರಾಷ್ಟ್ರ ಮಧ್ಯಪ್ರದೇಶದ ಭಾಗಗಳಲ್ಲಿ ಈ ಬೆಂಕಿ ವಿಸ್ಮಯ ಕಂಡು ಬಂದಿದೆ. ವಿಶೇಷ ಅಂದರೆ ತೀರಾ ಹತ್ತಿರದಲ್ಲಿ ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಇನ್ನೂ ಖಗೋಳ ಶಾಸ್ತ್ರಜ್ಞರ ಪ್ರಕಾರ ಇದು ಉಲ್ಕಾಪಾತವಾಗಿರದೇ ಚೈನಾ 2021 ರಲ್ಲಿ ಆಕಾಶಕ್ಕೆ ಹಾರಿಬಿಟ್ಟ ರಾಕೆಟ್​ನ ಅವಶೇಷಗಳು ಆಗಿರಬಹುದು ಎನ್ನಲಾಗುತ್ತಿದೆ.

ಮತ್ತೆ ಕೆಲವರು ಯಾವುದೋ ರಾಷ್ಟ್ರದ ಸ್ಯಾಟಲೈಟ್ ಭೂಕ್ಷಕ್ಷೆಗೆ ಬಂದು, ಉರುಳುತ್ತಿರುವ ದೃಶ್ಯ ಇದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇದು ರಾಕೆಟ್ ಒಂದರ ಅವಶೇಷವಾಗಿದ್ದು, ಇದು ನೆಲಕ್ಕೆ ಬಿದ್ದು ಉಳಿದ ಪಾರ್ಟ್​ಗಳನ್ನ ಸ್ಥಳೀಯವಾಗಿ ನೋಡಿದವರು ಇದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು