2:07 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಆಗಸದಲ್ಲಿ ಚಂದ್ರನ ಹುಡುಕುತ್ತಿದ್ದವರಿಗೆ ಕಾಣಿಸಿದ್ದು ಬೆಂಕಿಯ ಜ್ವಾಲೆ!:  ಏನಿದು ಜಲ್ವಿಸುತ್ತಾ ಹಾದು ಹೋಗಿದ್ದು?.!!

03/04/2022, 12:17

ಮಂಗಳೂರು(reporterkarnataka.com) ದೇಶದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದರ ನಡುವೆ ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಬೆಂಕಿಯ ಜ್ವಾಲೆಯೊಂದು ಸುಮಾರು ಹೊತ್ತು ಆಕಾಶದಲ್ಲಿ ಸಾಗಿದೆ.ಇದನ್ನ ಕಂಡವರು ಧೂಮಕೇತು ಇರಬೇಕು, ಹಬ್ಬದ ದಿನ ಅನಿಷ್ಟ ಕಂಡಂತಾಯ್ತು ಎಂಬಂತೆ ಮಾತನಾಡಿಕೊಂಡಿದ್ದಾರೆ.

ಬಳಿಕ ಅದು ಉಲ್ಕಾಪಾತ ಎಂದು ಹೇಳುವಂತಹ ಮಾತುಗಳು ಆರಂಭವಾಗಿದೆ. ಆದರೆ ಉಲ್ಕಾಪಾತದ ಬಣ್ಣ ಈ ರೀತಿಯಲ್ಲಿ ಇರುವುದಿಲ್ಲ ಎಂಬ ವಾದಗಳಿವೆ.

ಮಹಾರಾಷ್ಟ್ರ ಮಧ್ಯಪ್ರದೇಶದ ಭಾಗಗಳಲ್ಲಿ ಈ ಬೆಂಕಿ ವಿಸ್ಮಯ ಕಂಡು ಬಂದಿದೆ. ವಿಶೇಷ ಅಂದರೆ ತೀರಾ ಹತ್ತಿರದಲ್ಲಿ ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಇನ್ನೂ ಖಗೋಳ ಶಾಸ್ತ್ರಜ್ಞರ ಪ್ರಕಾರ ಇದು ಉಲ್ಕಾಪಾತವಾಗಿರದೇ ಚೈನಾ 2021 ರಲ್ಲಿ ಆಕಾಶಕ್ಕೆ ಹಾರಿಬಿಟ್ಟ ರಾಕೆಟ್​ನ ಅವಶೇಷಗಳು ಆಗಿರಬಹುದು ಎನ್ನಲಾಗುತ್ತಿದೆ.

ಮತ್ತೆ ಕೆಲವರು ಯಾವುದೋ ರಾಷ್ಟ್ರದ ಸ್ಯಾಟಲೈಟ್ ಭೂಕ್ಷಕ್ಷೆಗೆ ಬಂದು, ಉರುಳುತ್ತಿರುವ ದೃಶ್ಯ ಇದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇದು ರಾಕೆಟ್ ಒಂದರ ಅವಶೇಷವಾಗಿದ್ದು, ಇದು ನೆಲಕ್ಕೆ ಬಿದ್ದು ಉಳಿದ ಪಾರ್ಟ್​ಗಳನ್ನ ಸ್ಥಳೀಯವಾಗಿ ನೋಡಿದವರು ಇದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು