10:37 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ : ಮುಖ್ಯಮಂತ್ರಿ ಬೊಮ್ಮಾಯಿ

03/04/2022, 20:07

ಬೆಂಗಳೂರು(reporterkarnataka.com): ಹನುಮನ ಜನ್ಮಸ್ಥಳ ಹಂಪಿ ಬಳಿಯ ಅಂಜನಾದ್ರಿ ಶ್ರೀಕ್ಷೇತ್ರವನ್ನ ಅಭಿವೃದ್ಧಿಪಡಿಸಲು ಸರಕಾರ ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಶ್ರೀರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ ಪ್ರಾರಂಭವಾಗಲಿದೆ. ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ತಿಳಿದಿರುವ ತಜ್ಞರ ಹೆಸರುಗಳನ್ನು ಒದಗಿಸಲು ಮನವಿ ಮಾಡಲಾಗಿದೆ ಎಂದರು.

ಶ್ರೀ ರಾಮ ಸೇವಾ ಮಂಡಳಿಯವರು ಸ್ಥಾಪಿಸಲು ಉದ್ದೇಶಿಸಿರುವ ಕಲಾ ಸಾಕೇತ್ ಸ್ಥಾಪನೆಗೆ ಸರಕಾರ ನೆರವು ಒದಗಿಸುವುದು ಎಂದು ಭರವಸೆ ನೀಡಿದರು.

ಸಂಗೀತ ಅವಿಭಾಜ್ಯ ಅಂಗ: ಪ್ರತಿಶಬ್ಧಕ್ಕೂ ತನ್ನದೇ ರಾಗತಾಳವಿರುತ್ತದೆ. ಸಂಗೀತ ಮನುಷ್ಯನ ಸಂಗೀತ ಉತ್ಸಾಹ, ಆನಂದ, ಸಮಾಧಾನ, ಭಾವನೆಗಳನ್ನು ಅಭಿವ್ಯಕ್ತಿ ಪಡಿಸುವ ಮಾಧ್ಯಮವೂ ಹೌದು. ದಣಿದಾಗ ಸಂಗೀತ ಕೇಳಿದರೆ ಆಹ್ಲಾದ ಉಂಟಾಗುತ್ತದೆ ಎಂದರು.

ಕಳೆದ 8 ದಶಕಗಳಿಂದ ಶ್ರೀರಾಮನವಮಿ ಸಂದರ್ಭದಲ್ಲಿ ಸಂಗೀತೋತ್ಸವ ಆಯೋಜಿಸುತ್ತಿರುವ ಶ್ರೀರಾಮ ಸೇವಾ ಮಂಡಳಿಯ ಎಲ್ಲರೂ ಅಭಿನಂದನಾರ್ಹರು. ಸಂಗೀತದಿಂದ ಉತ್ತಮವಾಗಿ ಭಕ್ತಿಯ ಅಭಿವ್ಯಕ್ತಿಯಾಗುತ್ತದೆ. ಕೆಲವು ಭಕ್ತಿ ಗೀತೆಗಳು ಅತ್ಯಂತ ಪ್ರಭಾವಶಾಲಿಯಾಗಿರುತ್ತದೆ. ನಾನು ಶ್ರೀರಾಮ ಹಾಗೂ ಹನುಮನ ಭಕ್ತ. ಅದರೊಂದಿಗೆ ಸಂಗೀತದ ಭಕ್ತನೂ ಹೌದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು