3:34 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ 4 ಮಂದಿಗೆ ಜೀವಾವಧಿ ಶಿಕ್ಷೆ

04/04/2022, 13:13

ಬೆಳಗಾವಿ(reporterkarnataka.com): ಹಫ್ತಾಕ್ಕೆ ಬೇಡಿಕೆಗೆ ಒಪ್ಪದ ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ್  ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.

ಕೋಕಾ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಲಾಯಿತು. 3 ಕೋಟಿ ಹಫ್ತಾದ ಬೇಡಿಕೆಯನ್ನು ಇಡಲಾಗಿತ್ತು. ಆದರೆ ನಾಯಕ್ ಅವರು ಇದನ್ನು ಒಪ್ಪಲಿಲ್ಲ. ಈ ಕಾರಣಕ್ಕೆ ನಾಯಕ್ ಹತ್ಯೆ ನಡೆಯಿತು ಎಂದು ಆರೋಪಿಸಲಾಗಿತ್ತು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ 2013ರ ಡಿಸೆಂಬರ್ 21 ರಂದು ಉದ್ಯಮಿ ನಾಯಕ್ ಹತ್ಯೆ ನಡೆದಿತ್ತು. ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬನ್ನಂಜೆ ರಾಜಾ ಸೇರಿ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.

ಪ್ರಕರಣದಲ್ಲಿ ಕ್ರಮವಾಗಿ 2,3 ಮತ್ತು 4ನೇ ಆರೋಪಿಗಳು ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಬೆಂಗಳೂರಿನ ಅಭಿ ಬಂಡಗಾರ್, ಉಡುಪಿಯ ಗಣೇಶ್ ಭಜಂತ್ರಿ ಆಗಿದ್ದಾರೆ. 9ನೇ ಆರೋಪಿಯಾಗಿರುವ ಉಡುಪಿಯ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು