2:00 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸಾಣೂರು ಮುರತ್ತಂಗಡಿ: ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ಸಾವು

05/04/2022, 13:20

ಕಾರ್ಕಳ(reporterkarnataka.com):
ಮೂಡಬಿದ್ರಿ-ಕಾರ್ಕಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. 

ಇರ್ವತ್ತೂರಿನ ಅವಿನಾಶ್(27) ಘಟನೆಯಲ್ಲಿ ಮೃತಪಟ್ಟ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿರುವ ಅವಿನಾಶ್ ಪೈಟಿಂಗ್ ಕೆಲಸ ಮುಗಿಸಿ ಮನೆಯ ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹದ ಭಾಗ ಛಿದ್ರಗೊಂಡಿದ್ದು, ಹೊಟ್ಟೆಯ ಭಾಗದಿಂದ ಕರಳು ಹೊರ ಬಿದ್ದಿದೆ.

ಕಾರ್ಕಳ ನಗರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೆಸಿಬಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿರುವ ಮಾಹಿತಿ ಲಭಿಸಿದೆ. ಅದೇ ಕಾರಣದಿಂದ ಜೆಸಿಬಿ ತೆರವು ಕಾರ್ಯ ಒಂದಿಷ್ಟು ಹೊತ್ತು ವಿಳಂಬವಾಗಿತ್ತಾದರೂ, ಬದಲಿ ಚಾಲಕನ ಸಹಕಾರದಿಂದ ಜೆಸಿಬಿಯನ್ನು ತೆರವುಗೊಳಿಸಿ ಮೃತದೇಹವನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು