6:03 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಂದುವರಿದ ವ್ಯಾಘ್ರ ಆರ್ಭಟ: ಹುಲಿ ದಾಳಿಗೆ ಬಣಕಲ್ ಸಮೀಪ ಹಸು ಸಾವು

06/04/2022, 09:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಳ್ಳಿಯಲ್ಲಿ ಹುಲಿ ದಾಳಿ ಮುಂದುವರೆದಿದ್ದು ಹಸು ಸಾವನ್ನಪ್ಪಿದ ಘಟನೆ ನಡೆದಿದೆ

ಕಳೆದ ಎರಡು ವರ್ಷಗಳಿಂದ ಬಿ.ಹೊಸಳ್ಳಿಯಲ್ಲಿ ನಿರಂತರ ಹುಲಿ ದಾಳಿ ಮಾಡಿ ಅನೇಕ ಹಸುಗಳನ್ನು ಕೊಂದು ಹಾಕಿದೆ. ಸೋಮವಾರ ಗ್ರಾಮದ ಗೋಪಾಲ್ ಅವರ ಹಸು ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ಮಾಡಿ ಸಾಯಿಸಿದೆ. ಸ್ಥಳಕ್ಕೆ ಅರಣ್ಯ ರಕ್ಷಕ ಮೊಹಸಿನ್, ಜಾನುವಾರು ಅಧಿಕಾರಿ ಅಜೀಜ್ ಅಹಮ್ಮದ್  ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಹುಲಿ ಸ್ಥಳಾಂತರಿಸಲು ಒತ್ತಾಯ: ಬಿ.ಹೊಸಳ್ಳಿ,ಭಾರತೀಬೈಲ್,ಬಾನಳ್ಳಿ ಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ಹುಲಿ ದಾಳಿ ಸತತವಾಗಿ ನಡೆಯುತ್ತಿದೆ.ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೂ ತಂದು ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಗ್ರಾಮದ ಸುತ್ತಮುತ್ತ ಹುಲಿ ಸಂಚಾರದಿಂದ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು, ಗ್ರಾಮಸ್ಥರು ಓಡಾಡಲು ಭಯ ಪಡುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ಹುಲಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು