1:38 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ

06/04/2022, 10:48

ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಪ್ರಾಪ್ತೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದರು. ಈ ವೇಳೆ ರಕ್ಷಿಸಿದ ಹೆಣ್ಣು ಮಕ್ಕಳಲ್ಲಿ ನಾಲ್ವರು ಬಾಂಗ್ಲಾದೇಶದವರಾಗಿದ್ದು, ಅವರಲ್ಲಿ ಒಬ್ಬರು ಅಪ್ರಾಪ್ತೆಯಾಗಿದ್ದಾಳೆ.

ಈ ಸಂಬಂಧ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ ಮಾತನಾಡಿ, ಈ ಲಾಡ್ಜ್ನಲ್ಲಿ ಮೊದಲಿನಿಂದಲೂ ವೇಶ್ಯಾವಾಟಿಕೆ ದಂದೆ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ, ಏನೂ ಮಾಡಲು ಸಾಧ್ಯವಾಗಿರಲಿಲ್ಲ. ವಿಜಯನಗರ ಪೊಲೀಸ್ ಠಾಣೆಯ ಜಯಕುಮಾರ್ ಅವರ ಸಹಕಾರದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಿಂದೆಯೂ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದಾಳಿ ಮಾಡಿದ್ದರು. ಆದರೂ ಮತ್ತೆ ಅವರು ದಂಧೆ ಮುಂದುವರೆಸಿದ್ದಾರೆ. ಹಾಗಾಗಿ ಹೋಟೆಲ್ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು