8:10 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ

06/04/2022, 10:48

ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಪ್ರಾಪ್ತೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದರು. ಈ ವೇಳೆ ರಕ್ಷಿಸಿದ ಹೆಣ್ಣು ಮಕ್ಕಳಲ್ಲಿ ನಾಲ್ವರು ಬಾಂಗ್ಲಾದೇಶದವರಾಗಿದ್ದು, ಅವರಲ್ಲಿ ಒಬ್ಬರು ಅಪ್ರಾಪ್ತೆಯಾಗಿದ್ದಾಳೆ.

ಈ ಸಂಬಂಧ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ ಮಾತನಾಡಿ, ಈ ಲಾಡ್ಜ್ನಲ್ಲಿ ಮೊದಲಿನಿಂದಲೂ ವೇಶ್ಯಾವಾಟಿಕೆ ದಂದೆ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ, ಏನೂ ಮಾಡಲು ಸಾಧ್ಯವಾಗಿರಲಿಲ್ಲ. ವಿಜಯನಗರ ಪೊಲೀಸ್ ಠಾಣೆಯ ಜಯಕುಮಾರ್ ಅವರ ಸಹಕಾರದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಿಂದೆಯೂ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದಾಳಿ ಮಾಡಿದ್ದರು. ಆದರೂ ಮತ್ತೆ ಅವರು ದಂಧೆ ಮುಂದುವರೆಸಿದ್ದಾರೆ. ಹಾಗಾಗಿ ಹೋಟೆಲ್ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು