1:07 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಅಮೆರಿಕದ ನೆಲದಿಂದ ‘ಶಕುಂತಲಾ’ ಯಶಸ್ವಿ ಉಡಾವಣೆ: ಕಾಫಿನಾಡಿನ ಯುವ ವಿಜ್ಞಾನಿಯ ಅದ್ಬುತ ಸಾಧನೆ

06/04/2022, 12:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತನ್ನದೇ ಸ್ವಂತ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿ ಉಪಗ್ರಹವನ್ನು ತಯಾರಿಸಿ ಅಮೆರಿಕದ ಸ್ಪೆಸೆಕ್ಸ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶವೇ ಹೆಮ್ಮೆಪಡುವಂತ ಸಾಧನೆಯನ್ನು ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ಯುವಕ ಅವೇಜ್‌ ಅಹಮದ್‌ ಮಾಡಿದ್ದಾರೆ. 

ಆಲ್ದೂರು ಜನತೆ ತಮ್ಮ ಊರಿನ ಯುವಕನ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ

ಅವೇಜ್‌ ಅಹಮದ್‌ ಅವರ ಸಂಶೋಧನೆಯ ಉಪಗ್ರಹ ಬೇರೆ ಎಲ್ಲಾ ಉಪಗ್ರಹಗಳಿಗಿಂತ ಶೇ.50 ಹೆಚ್ಚು ಡೇಟಾವನ್ನು ಬಿಡುಗಡೆಗೊಳಿಸುತ್ತದೆ. ಈ ಉಪಗ್ರಹ ಭೂಮಿಯ ಚಲನವಲನದ ಫೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತದೆ.

ಇಸ್ರೋದಿಂದಲೇ ತಮ್ಮ ಪ್ರಥಮ ಉಪಗ್ರಹ ಆನಂದ್‌ ಅನ್ನು ಉಡಾವಣೆ ಮಾಡುವ ಮಹತ್ವಕಾಂಕ್ಷೆ ಅವೇಜ್‌ ಅವರದಾಗಿತ್ತು. ಆದರೆ ಇಸ್ರೋದಲ್ಲಿ ಉಡಾವಣೆಗೆ ಡೇಟ್‌ ಸಿಗದ ಕಾರಣ ತಮ್ಮದೇ ನಿರ್ಮಾಣದ ಮತ್ತೂಂದು ಉಪಗ್ರಹ ಶಕುಂತಲಾವನ್ನು ಅಮೆರಿಕಾದ ಸ್ಪೇಸೆಕ್ಸ್ ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಶೀಘ್ರದಲ್ಲೇ ಇಸ್ರೋದಿಂದ ತಮ್ಮ ಮೊದಲ ನಿರ್ಮಾಣದ ಉಪಗ್ರಹವನ್ನು ಉಡಾವಣೆ ಮಾಡುವ ಕನಸು ಶೀಘ್ರದಲ್ಲೇ ನನಸಾಗಲಿದೆ.

ಅವೇಜ್‌ ಅಹಮದ್‌ ಆಲ್ದೂರಿನ ರಾಯಲ್‌ ಮೆಡಿಕಲ್ಸ್‌ ಮಾಲೀಕ ನದೀಮ್‌ ಅಹಮದ್‌ ಅವರ ಪುತ್ರ. ಆಲ್ದೂರಿನ ರೋಸ್‌ ಬಡ್‌, ಅಕ್ಷರ ಪಬ್ಲಿಕ್‌ ಸ್ಕೂಲ್‌ನಲ್ಲಿ ಪ್ರಾಥಮಿಕ ಹಂತದ ಶಿಕ್ಷಣ ಪಡೆದು ಪ್ರೌಡಶಿಕ್ಷಣವನ್ನು ಆಲ್ದೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಮುಗಿಸಿದರು. ಸಿಇಟಿಯಲ್ಲಿ 477ನೇ ರ್‍ಯಾಂಕ್‌ ಪಡೆದು ಆರ್‌.ವಿ. ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಜೆಇಇ ಪರೀಕ್ಷೆಯಲ್ಲಿ 2000 ರ್‍ಯಾಂಕ್‌ ಪಡೆದು ಭಾರತದ ನಂ.1 ನಿಟ್‌ ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಭಾರತದ ನಂ.1 ಖಾಸಗಿ ಕಾಲೇಜು ಬಿಟ್ಸ್‌-ಪಿಲಾನಿ(ಬಿರ್ಲಾ ಇನ್ಸ್‌ಟಿಟ್ಯೂಟ್‌

ಆಫ್‌ಟೆಕ್ನಾಲಜಿ ಆ್ಯಂಡ್‌ ಸೈನ್ಸ್‌) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಮುಂದುವರಿಸಿದರು.

ಎಂಎಸ್ಸಿ ಮ್ಯಾಥಮೆಟಿಕ್ಸ್‌ ಡಿಗ್ರಿ ಪಡೆದು ಹೊರಬಂದ ಪಿಕ್ಸೆಲ್‌ ಎಂಬ ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿದ್ದಾರೆ.

ಬಾಲ್ಯದಿಂದಲೂ ಬ್ಯಾಹ್ಯಾಕಾಶದ ಬಗ್ಗೆ ಕುತೂಹಲ, ಆಸಕ್ತಿ ಬೆಳೆಸಿಕೊಂಡಿದ್ದು ಎಲನ್‌ ಮಾಸ್ಕ್ನ ಎರೋಸ್ಪೇಸ್‌ ಕಂಪೆನಿ “ಸ್ಪೆಸೆಕ್ಸ್‌’ ನಿಂದ ಪ್ರಭಾವಿತರಾದ ಅವೇಜ್‌ ಭಾರತದಲ್ಲಿಯೂ ಇದೇ ರೀತಿಯ ಕಂಪೆನಿ ಪ್ರಾರಂಭಿಸಬೇಕೆಂಬ ಹೆಬ್ಬಯಕೆ ಇಟ್ಟಿಕೊಂಡು ಇಂದು ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾಂರಭಿಸುವ ಮೂಲಕ ತಮ್ಮ ಕನಸಿಗೆ ರೆಕ್ಕೆ ಕಟ್ಟಿದ್ದಾರೆ. ತಾವು ನಿರ್ಮಿಸಿದ ಖಾಸಗಿ ಉಪಗ್ರಹವನ್ನು ಅಮೆರಿಕದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು