9:56 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಮೆರಿಕದ ನೆಲದಿಂದ ‘ಶಕುಂತಲಾ’ ಯಶಸ್ವಿ ಉಡಾವಣೆ: ಕಾಫಿನಾಡಿನ ಯುವ ವಿಜ್ಞಾನಿಯ ಅದ್ಬುತ ಸಾಧನೆ

06/04/2022, 12:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತನ್ನದೇ ಸ್ವಂತ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿ ಉಪಗ್ರಹವನ್ನು ತಯಾರಿಸಿ ಅಮೆರಿಕದ ಸ್ಪೆಸೆಕ್ಸ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶವೇ ಹೆಮ್ಮೆಪಡುವಂತ ಸಾಧನೆಯನ್ನು ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ಯುವಕ ಅವೇಜ್‌ ಅಹಮದ್‌ ಮಾಡಿದ್ದಾರೆ. 

ಆಲ್ದೂರು ಜನತೆ ತಮ್ಮ ಊರಿನ ಯುವಕನ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ

ಅವೇಜ್‌ ಅಹಮದ್‌ ಅವರ ಸಂಶೋಧನೆಯ ಉಪಗ್ರಹ ಬೇರೆ ಎಲ್ಲಾ ಉಪಗ್ರಹಗಳಿಗಿಂತ ಶೇ.50 ಹೆಚ್ಚು ಡೇಟಾವನ್ನು ಬಿಡುಗಡೆಗೊಳಿಸುತ್ತದೆ. ಈ ಉಪಗ್ರಹ ಭೂಮಿಯ ಚಲನವಲನದ ಫೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತದೆ.

ಇಸ್ರೋದಿಂದಲೇ ತಮ್ಮ ಪ್ರಥಮ ಉಪಗ್ರಹ ಆನಂದ್‌ ಅನ್ನು ಉಡಾವಣೆ ಮಾಡುವ ಮಹತ್ವಕಾಂಕ್ಷೆ ಅವೇಜ್‌ ಅವರದಾಗಿತ್ತು. ಆದರೆ ಇಸ್ರೋದಲ್ಲಿ ಉಡಾವಣೆಗೆ ಡೇಟ್‌ ಸಿಗದ ಕಾರಣ ತಮ್ಮದೇ ನಿರ್ಮಾಣದ ಮತ್ತೂಂದು ಉಪಗ್ರಹ ಶಕುಂತಲಾವನ್ನು ಅಮೆರಿಕಾದ ಸ್ಪೇಸೆಕ್ಸ್ ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಶೀಘ್ರದಲ್ಲೇ ಇಸ್ರೋದಿಂದ ತಮ್ಮ ಮೊದಲ ನಿರ್ಮಾಣದ ಉಪಗ್ರಹವನ್ನು ಉಡಾವಣೆ ಮಾಡುವ ಕನಸು ಶೀಘ್ರದಲ್ಲೇ ನನಸಾಗಲಿದೆ.

ಅವೇಜ್‌ ಅಹಮದ್‌ ಆಲ್ದೂರಿನ ರಾಯಲ್‌ ಮೆಡಿಕಲ್ಸ್‌ ಮಾಲೀಕ ನದೀಮ್‌ ಅಹಮದ್‌ ಅವರ ಪುತ್ರ. ಆಲ್ದೂರಿನ ರೋಸ್‌ ಬಡ್‌, ಅಕ್ಷರ ಪಬ್ಲಿಕ್‌ ಸ್ಕೂಲ್‌ನಲ್ಲಿ ಪ್ರಾಥಮಿಕ ಹಂತದ ಶಿಕ್ಷಣ ಪಡೆದು ಪ್ರೌಡಶಿಕ್ಷಣವನ್ನು ಆಲ್ದೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಮುಗಿಸಿದರು. ಸಿಇಟಿಯಲ್ಲಿ 477ನೇ ರ್‍ಯಾಂಕ್‌ ಪಡೆದು ಆರ್‌.ವಿ. ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಜೆಇಇ ಪರೀಕ್ಷೆಯಲ್ಲಿ 2000 ರ್‍ಯಾಂಕ್‌ ಪಡೆದು ಭಾರತದ ನಂ.1 ನಿಟ್‌ ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಭಾರತದ ನಂ.1 ಖಾಸಗಿ ಕಾಲೇಜು ಬಿಟ್ಸ್‌-ಪಿಲಾನಿ(ಬಿರ್ಲಾ ಇನ್ಸ್‌ಟಿಟ್ಯೂಟ್‌

ಆಫ್‌ಟೆಕ್ನಾಲಜಿ ಆ್ಯಂಡ್‌ ಸೈನ್ಸ್‌) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಮುಂದುವರಿಸಿದರು.

ಎಂಎಸ್ಸಿ ಮ್ಯಾಥಮೆಟಿಕ್ಸ್‌ ಡಿಗ್ರಿ ಪಡೆದು ಹೊರಬಂದ ಪಿಕ್ಸೆಲ್‌ ಎಂಬ ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿದ್ದಾರೆ.

ಬಾಲ್ಯದಿಂದಲೂ ಬ್ಯಾಹ್ಯಾಕಾಶದ ಬಗ್ಗೆ ಕುತೂಹಲ, ಆಸಕ್ತಿ ಬೆಳೆಸಿಕೊಂಡಿದ್ದು ಎಲನ್‌ ಮಾಸ್ಕ್ನ ಎರೋಸ್ಪೇಸ್‌ ಕಂಪೆನಿ “ಸ್ಪೆಸೆಕ್ಸ್‌’ ನಿಂದ ಪ್ರಭಾವಿತರಾದ ಅವೇಜ್‌ ಭಾರತದಲ್ಲಿಯೂ ಇದೇ ರೀತಿಯ ಕಂಪೆನಿ ಪ್ರಾರಂಭಿಸಬೇಕೆಂಬ ಹೆಬ್ಬಯಕೆ ಇಟ್ಟಿಕೊಂಡು ಇಂದು ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾಂರಭಿಸುವ ಮೂಲಕ ತಮ್ಮ ಕನಸಿಗೆ ರೆಕ್ಕೆ ಕಟ್ಟಿದ್ದಾರೆ. ತಾವು ನಿರ್ಮಿಸಿದ ಖಾಸಗಿ ಉಪಗ್ರಹವನ್ನು ಅಮೆರಿಕದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು