8:42 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬಾಲ್ಯ ವಿವಾಹ ತಡೆಗೆ ಹೋರಾಟವನ್ನೇ ನಡೆಸುತ್ತಿರುವ ದಕ್ಷ ಅಧಿಕಾರಿಯಾದ ಶರಣಮ್ಮ ಕರ್ನೂರ್

12/06/2021, 06:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವುದರ ಜೊತೆಗೆ ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶರಣಮ್ಮ ಕರ್ನೂರ್  ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅವರು ಕಳೆದ ವರ್ಷಗಳಿಂದ ಲಿಂಗ್ಸುರ್ ತಾಲೂಕಿನಲ್ಲಿ ಬಾಲ್ಯ ವಿವಾಹ ಪದ್ಧತಿಯನ್ನು ತಡೆಯಲು ಹೋರಾಟವನ್ನೇ ನಡೆಸಿಕೊಂಡು ಬಂದಿದ್ದಾರೆ. ಶಿಶು ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷತೆಯಲ್ಲಿ 54 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಕೆಸರಟ್ಟಿ ಮಿಂಚೇರಿ ತಾಂಡ, ನೀರಲಕೇರಿಯಲ್ಲಿ ಎರಡು ಪ್ರಕರಣಗಳು ಬಾಲ್ಯವಿವಾಹ ಕಾಯ್ದೆಡಿಯಲ್ಲಿ ದಾಖಲಾಗಿದೆ.  

ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ತಡೆಯಲು ತಾಲೂಕು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. 1098 ಸಹಾಯವಾಣಿ ಕರೆ ಮಾಡಿ ಮಾಹಿತಿ ತಿಳಿಸಬೇಕು. ಮಾಹಿತಿ ನೀಡಿ ವ್ಯಕ್ತಿಯ ಹೆಸರು ಗೋಪ್ಯವಾಗಿ ಇಡಲಾಗುವುದು. ಒಟ್ಟಿನಲ್ಲಿ ಸಾರ್ವಜನಿಕರು ಬಾಲ್ಯ ವಿವಾಹ ನಡೆಯದಂತೆ

ಸಹಕರಿಸಬೇಕು. ಎಲ್ಲರೂ ಧೈರ್ಯವಾಗಿ ಮುಂದೆ ಬರಬೇಕು ಎಂದು ಶರಣಮ್ಮ ಕರ್ನೂರ್ ತಿಳಿಸಿದ್ದಾರೆ.

ಇಂಥ ಪ್ರಕರಣಗಳು ಈಗಾಗಲೇ ಮಹಿಳಾ ಮಕ್ಕಳ ಇಲಾಖೆಯ ಅಧಿಕಾರಿಗಳ ಪ್ರಾಣಕ್ಕೆ ಅಪಾಯ ತಂದಿದೆ. ಲಿಂಗಸ್ಗೂರು ಶಿಶು ಅಭಿವೃದ್ಧಿ ಇಲಾಖೆಯಲ್ಲಿ  ಕೆಲಸ ಮಾಡಿದ ಯೋಗಿತಾ ಬಾಯಿ ಅವರ ಮೇಲೆ ಹಲ್ಲೆ ಕೂಡ ನಡೆದಿದೆ.

ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಯೋಜನೆಯೊಂದಿಗೆ ಕೈ ಜೋಡಿಸಿ ಬಾಲ್ಯ ವಿವಾಹ ತಡೆಯಲು ಮುಂದಾಗಬೇಕು ಎಂದು ಶರಣಮ್ಮ ಕರ್ನೂಲ್  ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು