6:14 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ಪೊಲೀಸ್ ಇಲಾಖೆ ನೋಟಿಸ್‌ 

07/04/2022, 10:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು