6:07 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ

07/04/2022, 18:56

ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು.

ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ ಸಭೆಯಲ್ಲಿ ಮಾತನಾಡಿದರು.

ಬ್ಯಾಂಕುಗಳಲ್ಲಿ ಕನ್ನಡ ಭಾಷೆಗೆ  ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅರ್ಜಿ, ಚಲನ್, ನಾಮ ಫಲಕಗಳು, ಜಾಹಿರಾತುಗಳು,  ನಮೂನೆ, ಚೆಕ್, ರಸೀದಿ ಸೇರಿದಂತೆ ಇತ್ಯಾದಿಗಳು ಕನ್ನಡದಲ್ಲೇ ಮುದ್ರಿತಗೊಂಡು ಗ್ರಾಹಕರ ಕೈಸೇರಬೇಕು. ಹಿಂದಿ-ಇಂಗ್ಲೀಷ್  ಭಾಷೆಗೆ ನೀಡುವ ಸ್ಥಾನ ಮಾನ ಕನ್ನಡ ಭಾಷೆಗೂ ದೊರಕಬೇಕು ಎಂದರು.

ಹೊರ ರಾಜ್ಯಗಳಿಂದ ಬರುವ ಉದ್ಯೋಗಿಗಳು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಹಾಗೂ ಅದಕ್ಕೆ ಅನುಕೂಲವಾಗುವಂತಹ ತರಬೇತಿಗಳನ್ನು ಆಯೋಜಿಸಬೇಕು, ಒಂದು ವೇಳೆ ಕನ್ನಡವನ್ನು ಕಲಿಯದೇ , ಕನ್ನಡವನ್ನು ಬಳಸದೇ ಹೋದಲ್ಲಿ ಅಂತಹ ಉದ್ಯೋಗಿಗಳ ವಿರುದ್ದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರೈತರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಅರ್ಥವಾಗಲು ಬ್ಯಾಂಕಿನ ಅಧಿಕೃತ ವೆಬ್‍ಸೈಟ್ ಹಾಗೂ ಮೊಬೈಲ್ ಬ್ಯಾಂಕಿಂಗ್ ನಲ್ಲಿ  ಕನ್ನಡ ಭಾಷೆಯನ್ನು ಅನುಷ್ಡಾನಕ್ಕೆ ತರಬೇಕು, ಬ್ಯಾಂಕುಗಳಲ್ಲಿರುವ ಕನ್ನಡ ಘಟಕಗಳಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದ ಎಲ್ಲಾ ಆಚರಣೆಗಳನ್ನು ನಡೆಸಬೇಕು ಹಾಗೂ ಬ್ಯಾಂಕುಗಳ ಮಾಸಪತ್ರಿಕೆಗಳಲ್ಲಿಯೂ ಕನ್ನಡ ಭಾಷೆಯ ಲೇಖನಗಳಿರಬೇಕು,  ಕರ್ನಾಟಕದಲ್ಲಿ ವ್ಯಹರಿಸುವ ಭಾಷೆಗಳೇ ಕನ್ನಡವನ್ನು ಬಳಸದೆ ಇತರೆ ಭಾಷೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಮುಂದೆ ಕನ್ನಡವನ್ನು ಹುಡುಕುವ ಪರಿಸ್ಥಿತಿ ಎದುರಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಈ ಸಂಧರ್ಭದಲ್ಲಿ ಬ್ಯಾಂಕ್ ನ ವಲಯ ಮಹಾ ಪ್ರಬಂಧಕರಾದ ಗಾಯತ್ರಿ,  ಉಪ ಮಹಾ ಪ್ರಬಂಧಕ ಗೋಪಾಲಕೃಷ್ಣ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್ ಗುಬ್ಬಿಗೂಡು , ಕಾರ್ಯದರ್ಶಿ ಡಾ.ಸಂತೋಷ್ , ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಇತರೆ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು