3:37 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ

07/04/2022, 18:56

ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು.

ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ ಸಭೆಯಲ್ಲಿ ಮಾತನಾಡಿದರು.

ಬ್ಯಾಂಕುಗಳಲ್ಲಿ ಕನ್ನಡ ಭಾಷೆಗೆ  ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅರ್ಜಿ, ಚಲನ್, ನಾಮ ಫಲಕಗಳು, ಜಾಹಿರಾತುಗಳು,  ನಮೂನೆ, ಚೆಕ್, ರಸೀದಿ ಸೇರಿದಂತೆ ಇತ್ಯಾದಿಗಳು ಕನ್ನಡದಲ್ಲೇ ಮುದ್ರಿತಗೊಂಡು ಗ್ರಾಹಕರ ಕೈಸೇರಬೇಕು. ಹಿಂದಿ-ಇಂಗ್ಲೀಷ್  ಭಾಷೆಗೆ ನೀಡುವ ಸ್ಥಾನ ಮಾನ ಕನ್ನಡ ಭಾಷೆಗೂ ದೊರಕಬೇಕು ಎಂದರು.

ಹೊರ ರಾಜ್ಯಗಳಿಂದ ಬರುವ ಉದ್ಯೋಗಿಗಳು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಹಾಗೂ ಅದಕ್ಕೆ ಅನುಕೂಲವಾಗುವಂತಹ ತರಬೇತಿಗಳನ್ನು ಆಯೋಜಿಸಬೇಕು, ಒಂದು ವೇಳೆ ಕನ್ನಡವನ್ನು ಕಲಿಯದೇ , ಕನ್ನಡವನ್ನು ಬಳಸದೇ ಹೋದಲ್ಲಿ ಅಂತಹ ಉದ್ಯೋಗಿಗಳ ವಿರುದ್ದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರೈತರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಅರ್ಥವಾಗಲು ಬ್ಯಾಂಕಿನ ಅಧಿಕೃತ ವೆಬ್‍ಸೈಟ್ ಹಾಗೂ ಮೊಬೈಲ್ ಬ್ಯಾಂಕಿಂಗ್ ನಲ್ಲಿ  ಕನ್ನಡ ಭಾಷೆಯನ್ನು ಅನುಷ್ಡಾನಕ್ಕೆ ತರಬೇಕು, ಬ್ಯಾಂಕುಗಳಲ್ಲಿರುವ ಕನ್ನಡ ಘಟಕಗಳಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದ ಎಲ್ಲಾ ಆಚರಣೆಗಳನ್ನು ನಡೆಸಬೇಕು ಹಾಗೂ ಬ್ಯಾಂಕುಗಳ ಮಾಸಪತ್ರಿಕೆಗಳಲ್ಲಿಯೂ ಕನ್ನಡ ಭಾಷೆಯ ಲೇಖನಗಳಿರಬೇಕು,  ಕರ್ನಾಟಕದಲ್ಲಿ ವ್ಯಹರಿಸುವ ಭಾಷೆಗಳೇ ಕನ್ನಡವನ್ನು ಬಳಸದೆ ಇತರೆ ಭಾಷೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಮುಂದೆ ಕನ್ನಡವನ್ನು ಹುಡುಕುವ ಪರಿಸ್ಥಿತಿ ಎದುರಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಈ ಸಂಧರ್ಭದಲ್ಲಿ ಬ್ಯಾಂಕ್ ನ ವಲಯ ಮಹಾ ಪ್ರಬಂಧಕರಾದ ಗಾಯತ್ರಿ,  ಉಪ ಮಹಾ ಪ್ರಬಂಧಕ ಗೋಪಾಲಕೃಷ್ಣ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್ ಗುಬ್ಬಿಗೂಡು , ಕಾರ್ಯದರ್ಶಿ ಡಾ.ಸಂತೋಷ್ , ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಇತರೆ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು