12:09 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಡ್ಯದ ಯುವತಿಯ ಹೊಗಳಿ ಉಗ್ರ ಸಂಘಟನೆ ಮುಖ್ಯಸ್ಥನಿಂದ ವೀಡಿಯೋ ಬಿಡುಗಡೆ: ಪೊಲೀಸ್ ತನಿಖೆಗೆ ಸಿಎಂ ಸೂಚನೆ

07/04/2022, 23:32

ಮೈಸೂರು(reporterkarnataka.com): ಅಲ್ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಡ್ಯದ ಯುವತಿ ಮಸ್ಕಾನ್ ಬಗ್ಗೆ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಹೊಗಳಿ ಬಿಡುಗಡೆ ಮಾಡಿರುವ ವಿಡಿಯೋದ ಸತ್ಯತೆ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಲ್ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಹೇಳಿಕೆ ನೀಡಿದರೆ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಯಾಕೇ ಗಲಿಬಿಲಿ. ಸಿದ್ದರಾಮಯ್ಯನವರ ಈ ಹೇಳಿಕೆ ಯಾವುದೇ ಲಾಜೀಕ್ ಇಲ್ಲ, ಆಧಾರವೂ ಇಲ್ಲ, ಹೂಲಿಕೆಯಾಗದ ಹೇಳಿಕೆ ಎಂದು ಟಾಂಗ್ ನೀಡಿದರು. ಈ ನೆಲದ ಮತ್ತು ಕಾನೂನಿನ ವಿರುದ್ಧ ನಿರಂತರ ಷಡ್ಯಂತ್ರ ನಡೆದಿವೆ. ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿಕೆಗೆ ಆಲ್ ಖೈದಾ ಬೆಂಬಲ ನೀಡಿರುವ ವಿಚಾರದ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವಿದ್ಯುತ್ , ಜಲಸಂಪನ್ಮೂಲ, ಹಣಕಾಸು ಇಲಾಖೆ ಸಂಬoಧಿಸಿದoತೆ ಕೇಂದ್ರದಿoದ ರಾಜ್ಯದ ಅಭಿವೃದ್ಧಿ ಕೆಲಸಗಳ ಚರ್ಚೆ ನಡೆಸಿದ್ದೇನೆ. ಅನೇಕ ವಿಚಾರಗಳ ಕುರಿತು ಚರ್ಚಿಸಿದ್ದೇನೆ. ಬೇಡಿಕೆಗಳಿಗೆ ಕೇಂದ್ರದಿoದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಬರುವ ದಿನಗಳಲ್ಲಿ ಹಲವಾರು ಯೋಜನೆಗಳಿಗೆ ಮಂಜೂರಾತಿ, ಪರವಾನಗಿ ಸಿಗಲಿದೆ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ ಮಾಡಿದ್ದೇನೆ. ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕೋ, ಅಥವಾ ವಿಸ್ತರಣೆ ಮಾಡಬೇಕೋ ಎಂಬುದರ ಬಗ್ಗೆ ರಾಜ್ಯದಲ್ಲಿ ಈ ತಿಂಗಳು ನಡೆಯುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಾತ್ವಿಕವಾಗಿ ನಿರ್ಧಾರವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಈ ವೇಳೆ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು